ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ರಾಮಶೆಟ್ಟಿ, ‘ಸರ್ಕಾರ ಲಾಕ್ಡೌನ್ ಹೇರಿದೆ. ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ನಂತರ ಕಟ್ಟುನಿಟ್ಟಿನ ಲಾಕ್ಡೌನ್ ಘೋಷಿಸಿದೆ. ಈಗ ಜಿಲ್ಲಾಡಳಿತ ವಾರದ 4 ದಿನ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಆದರೆ, ಇವುಗಳ ಹೊರತಾಗಿಯೂ ಜನರು ಬೀದಿಗಳಲ್ಲಿ ಯಾವುದೇ ಭೀತಿ ಇಲ್ಲದೇ ಸಂಚರಿಸುತ್ತಿದ್ದಾರೆ. ಇದನ್ನು ತಡೆಯಲು ಈ ರೀತಿ ನಾವೇ ಸ್ವಯಂಪ್ರೇರಿತರಾಗಿ ರಸ್ತೆ ಬಂದ್ ಮಾಡಿದ್ದೇವೆ’ ಎಂದರು.