<p><strong>ಚಾಮರಾಜನಗರ:</strong> ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಬೇಕು ಎಂದು ಹಾರೈಸಿ ಜಿಲ್ಲೆಯ ಹಲವೆಡೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.</p><p>ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಆರ್ಸಿಬಿ ಗೆಲುವಿಗೆ ಶಿವ ಅಷ್ಟೋತ್ತರ ಬಿಲ್ವಾರ್ಚನೆ ನಡೆಯಿತು. ಬೆಂಗಳೂರಿನಿಂದ ಬಂದಿದ್ದ ಭಕ್ತರು ಬಿಲ್ವಾರ್ಚನೆ ಮಾಡಿಸಿದ್ದು ಅವರ ಅಭಿಲಾಶೆಯಂತೆ ಆರ್ಸಿಬಿ ತಂಡದ ಗೆಲುವಿಗೆ ದೇವರಲ್ಲಿ ಪ್ರಾರ್ಥಿಸಲಾಯಿತು ಎಂದು ದೇವಸ್ಥಾನದ ಸಿಬ್ಬಂದಿ ಮಾಹಿತಿ ನೀಡಿದರು.</p><p><strong>ಹರಳಕೋಟೆ ದೇಗುಲದಲ್ಲೂ ಪೂಜೆ:</strong></p><p>ಚಾಮರಾಜನಗರ ತಾಲ್ಲೂಕಿನ ಪ್ರಸಿದ್ಧ ಹರಳಕೋಟೆ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಆರ್ಸಿಬಿ ಗೆಲುವಿಗಾಗಿ ವಿಶೇಷ ಪೂಜೆ ನಡೆಯಿತು. ಬೆಂಗಳೂರು ಆಟಗಾರರ ಹೆಸರಿನಲ್ಲಿ ವಿಶೇಷ ಅರ್ಚನೆ, ಸಂಕಲ್ಪ ಪೂಜೆ ಮಾಡಿಸಲಾಯಿತು. ಅರ್ಚಕ ಅನಂತ ಪ್ರಸಾದ್ ವಿಶೇಷ ಪೂಜೆ ನೆರವೇರಿಸಿದರು.</p><p>ಕಳೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಭಾರತದ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದಾಗ ಇಷ್ಟಾರ್ಥ ಸಿದ್ಧಿಸಿತ್ತು. ಈ ಬಾರಿಯ ಪೂಜೆಯಲ್ಲೂ ಹೂವಿನ ಪ್ರಸಾದ ದೊರೆತಿದ್ದು ಬೆಂಗಳೂರು ತಂಡ ಗೆಲ್ಲುವ ವಿಶ್ವಾಸವಿದೆ ಎಂದು ಅಭಿಮಾನಿಗಳಾದ ತೇಜು, ಮಲ್ಲೇಶ್, ಚರಣ್ ತಿಳಿಸಿದರು.</p><p>ನಗರದ ಭುವನೇಶ್ವರಿ ವೃತ್ತ ಸೇರಿದಂತೆ ಹಲವು ಕಡೆಗಳಲ್ಲಿ ಆರ್ಸಿಬಿ ಗೆಲುವಿಗೆ ಶುಭಾಶಯ ಕೋರಿ ಅಭಿಮಾನಿಗಳು ಫ್ಲೆಕ್ಸ್ ಹಾಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಬೇಕು ಎಂದು ಹಾರೈಸಿ ಜಿಲ್ಲೆಯ ಹಲವೆಡೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.</p><p>ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಆರ್ಸಿಬಿ ಗೆಲುವಿಗೆ ಶಿವ ಅಷ್ಟೋತ್ತರ ಬಿಲ್ವಾರ್ಚನೆ ನಡೆಯಿತು. ಬೆಂಗಳೂರಿನಿಂದ ಬಂದಿದ್ದ ಭಕ್ತರು ಬಿಲ್ವಾರ್ಚನೆ ಮಾಡಿಸಿದ್ದು ಅವರ ಅಭಿಲಾಶೆಯಂತೆ ಆರ್ಸಿಬಿ ತಂಡದ ಗೆಲುವಿಗೆ ದೇವರಲ್ಲಿ ಪ್ರಾರ್ಥಿಸಲಾಯಿತು ಎಂದು ದೇವಸ್ಥಾನದ ಸಿಬ್ಬಂದಿ ಮಾಹಿತಿ ನೀಡಿದರು.</p><p><strong>ಹರಳಕೋಟೆ ದೇಗುಲದಲ್ಲೂ ಪೂಜೆ:</strong></p><p>ಚಾಮರಾಜನಗರ ತಾಲ್ಲೂಕಿನ ಪ್ರಸಿದ್ಧ ಹರಳಕೋಟೆ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಆರ್ಸಿಬಿ ಗೆಲುವಿಗಾಗಿ ವಿಶೇಷ ಪೂಜೆ ನಡೆಯಿತು. ಬೆಂಗಳೂರು ಆಟಗಾರರ ಹೆಸರಿನಲ್ಲಿ ವಿಶೇಷ ಅರ್ಚನೆ, ಸಂಕಲ್ಪ ಪೂಜೆ ಮಾಡಿಸಲಾಯಿತು. ಅರ್ಚಕ ಅನಂತ ಪ್ರಸಾದ್ ವಿಶೇಷ ಪೂಜೆ ನೆರವೇರಿಸಿದರು.</p><p>ಕಳೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಭಾರತದ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿದಾಗ ಇಷ್ಟಾರ್ಥ ಸಿದ್ಧಿಸಿತ್ತು. ಈ ಬಾರಿಯ ಪೂಜೆಯಲ್ಲೂ ಹೂವಿನ ಪ್ರಸಾದ ದೊರೆತಿದ್ದು ಬೆಂಗಳೂರು ತಂಡ ಗೆಲ್ಲುವ ವಿಶ್ವಾಸವಿದೆ ಎಂದು ಅಭಿಮಾನಿಗಳಾದ ತೇಜು, ಮಲ್ಲೇಶ್, ಚರಣ್ ತಿಳಿಸಿದರು.</p><p>ನಗರದ ಭುವನೇಶ್ವರಿ ವೃತ್ತ ಸೇರಿದಂತೆ ಹಲವು ಕಡೆಗಳಲ್ಲಿ ಆರ್ಸಿಬಿ ಗೆಲುವಿಗೆ ಶುಭಾಶಯ ಕೋರಿ ಅಭಿಮಾನಿಗಳು ಫ್ಲೆಕ್ಸ್ ಹಾಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>