<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ತೆರಕಣಾಂಬಿ ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ನೆಲಕಚ್ಚಿದ ಬಾಳೆ ಬೆಳೆಯ ಜಮೀನುಗಳಿಗೆ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ, ಬೆಳೆ ಹಾನಿ ಸಮೀಕ್ಷೆ ನಡೆಸಿದರು.</p>.<p>ಸೋಮನಪುರ, ಶೀಲವಂತಪುರ, ಕೆ.ಕೆ.ಹುಂಡಿ, ಕೊಡಸೋಗೆ, ಉಲ್ಲಾಣ, ಮಾರಿಹೊಸಹಳ್ಳಿ ಸೇರಿದಂತೆ ವಿವಿಧೆಡೆ ಹಲವು ಮಂದಿ ರೈತರ ಜಮೀನುಗಳಿಗೆ ಭೇಟಿ ನೀಡಿದ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ತೋಟಗಾರಿಕೆಯ ಬಾಳೆ ಬೆಳೆ ಯಾವ ಪ್ರಮಾಣದಲ್ಲಿ ನೆಲಕಚ್ಚಿ, ನಷ್ಟ ಉಂಟಾಗಿದೆ ಎಂದು ಸ್ಥಳ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.</p>.<p>ಈ ಕುರಿತು ತೋಟಗಾರಿಕೆ ಇಲಾಖೆ ಅಧಿಕಾರಿ ಕುಮಾರ್.ಬಿ ಮಾತನಾಡಿ, ಸುಮಾರು 50 ಹೆಕ್ಟರ್ ಪ್ರದೇಶದಲ್ಲಿ ಹಾನಿಯಾಗಿದೆ. ಈ ಬಗ್ಗೆ ಸ್ಥಳೀಯ ಶಾಸಕರು, ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರ್ಕಾರದ ಮಾರ್ಗಸೂಚಿಯ ಅನ್ವಯ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರ ದೊರಕಿಸಲಾಗುವುದು ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಅಧಿಕಾರಿ ಮಹೇಶ್, ಗೋವರ್ಧನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ತಾಲ್ಲೂಕಿನ ತೆರಕಣಾಂಬಿ ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ನೆಲಕಚ್ಚಿದ ಬಾಳೆ ಬೆಳೆಯ ಜಮೀನುಗಳಿಗೆ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ, ಬೆಳೆ ಹಾನಿ ಸಮೀಕ್ಷೆ ನಡೆಸಿದರು.</p>.<p>ಸೋಮನಪುರ, ಶೀಲವಂತಪುರ, ಕೆ.ಕೆ.ಹುಂಡಿ, ಕೊಡಸೋಗೆ, ಉಲ್ಲಾಣ, ಮಾರಿಹೊಸಹಳ್ಳಿ ಸೇರಿದಂತೆ ವಿವಿಧೆಡೆ ಹಲವು ಮಂದಿ ರೈತರ ಜಮೀನುಗಳಿಗೆ ಭೇಟಿ ನೀಡಿದ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ತೋಟಗಾರಿಕೆಯ ಬಾಳೆ ಬೆಳೆ ಯಾವ ಪ್ರಮಾಣದಲ್ಲಿ ನೆಲಕಚ್ಚಿ, ನಷ್ಟ ಉಂಟಾಗಿದೆ ಎಂದು ಸ್ಥಳ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.</p>.<p>ಈ ಕುರಿತು ತೋಟಗಾರಿಕೆ ಇಲಾಖೆ ಅಧಿಕಾರಿ ಕುಮಾರ್.ಬಿ ಮಾತನಾಡಿ, ಸುಮಾರು 50 ಹೆಕ್ಟರ್ ಪ್ರದೇಶದಲ್ಲಿ ಹಾನಿಯಾಗಿದೆ. ಈ ಬಗ್ಗೆ ಸ್ಥಳೀಯ ಶಾಸಕರು, ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರ್ಕಾರದ ಮಾರ್ಗಸೂಚಿಯ ಅನ್ವಯ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರ ದೊರಕಿಸಲಾಗುವುದು ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಅಧಿಕಾರಿ ಮಹೇಶ್, ಗೋವರ್ಧನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>