‘ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹಿಸಿದ ದತ್ತಾಂಶವನ್ನು ಕೃಷಿ, ರೇಷ್ಮೆ, ತೋಟಗಾರಿಕೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು, ಅನುಕೂಲವಾಗಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜಗೆ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿ ಯಲ್ಲಿ ಬೆಳೆ ವಿವರ ದಾಖಲಾತಿ, ಎನ್.ಡಿ.ಆರ್ ಎಫ್ ಮತ್ತು ಎಸ್.ಟಿ.ಆರ್.ಎಫ್ ನಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯಧನ ನೀಡುವ ಸಲುವಾಗಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸಲು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ತಿಳಿಸಿದ್ದಾರೆ.