<p><strong>ಚಾಮರಾಜನಗರ:</strong> ಚಾಮರಾಜನಗರ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಗುಡ್ಡಗಾಡು ಓಟ ಕ್ರೀಡಾಕೂಟದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ.ಸ್ವಾಮಿ ಅಭಿನಂದಿಸಿದರು.</p>.<p>ನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಸೋಮವಾರ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಜೆಎಸ್ಸ್ ಕಾಲೇಜು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿರುವುದು ಕಾಲೇಜಿಗೆ ಹೆಮ್ಮೆಯ ವಿಚಾರ. ಮುಂದೆಯೂ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಸಾಧನೆ ಮಾಡಲಿ ಎಂದು ಆಶಿಸಿದರು.</p>.<p>ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಪ್ರತಿಭೆಗೂ ನೀರೆರದು ಪೋಷಿಸಲಾಗುತ್ತಿದೆ. ಪಠ್ಯದಷ್ಟೆ ಪಠ್ಯೇತ್ತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪರಿಣಾಮ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು.</p>.<p>ಜೆಎಸ್ಎಸ್ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿನಿ ಹೇಮಾ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ಕಾಲೇಜಿನ ಇತರೆ ವಿದ್ಯಾರ್ಥಿನಿಯರು ಕೂಡ ಉತ್ತಮ ಪ್ರದರ್ಶನ ನೀಡಿರುವುದು ಸಂತಸದ ಸಂಗತಿ ಎಂದರು.</p>.<p>ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಹೇಮಾ ಮಾತನಾಡಿ, ‘ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಪೋಷಕರು ಸ್ಪೂರ್ತಿ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ಮಹದೇವಸ್ವಾಮಿ ಮಾತನಾಡಿ, ಕಾಲೇಜಿನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿನಿಯರು ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದರು.</p>.<p>ಚಾಮರಾಜನಗರ ವಿಶ್ವವಿದ್ಯಾಲಯ ಕ್ರೀಡಾ ಸಲಹೆ ಸಮಿತಿ ಸದಸ್ಯ ಜಿ.ಬಂಗಾರು ಮಾತನಾಡಿ, ‘ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಾಂತರಾಜು ಮಾರ್ಗದರ್ಶನ ಹಾಗೂ ನಿರಂತರವಾಗಿ ಕ್ರೀಡಾಕೂಟಗಳ ಆಯೋಜನೆಯ ಫಲವಾಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಸಹಕಾರಿಯಾಗಿದೆ ಎಂದರು.</p>.<p>ವಿದ್ಯಾರ್ಥಿನಿಯರಾದ ಜಿ.ಸೌಂದರ್ಯ, ಎನ್.ಪಾರ್ವತಿ, ಎ ಐಶ್ವರ್ಯಾ ಮಾತನಾಡಿದರು. ಉಪನ್ಯಾಸಕ ವಿಕ್ರಂ, ಕಾಲೇಜಿನ ವ್ಯವಸ್ಥಾಪಕ ಗುರುಮಲ್ಲಪ್ಪ, ಕ್ರೀಡಾ ಇಲಾಖೆ ಸಹಾಯಕ ವೀರಣ್ಣ, ವಿದ್ಯಾರ್ಥಿನಿರಾದ ಪ್ರಿಯಾ ಪಿ, ನವ್ಯಾ ಎನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಚಾಮರಾಜನಗರ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಗುಡ್ಡಗಾಡು ಓಟ ಕ್ರೀಡಾಕೂಟದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ.ಸ್ವಾಮಿ ಅಭಿನಂದಿಸಿದರು.</p>.<p>ನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಸೋಮವಾರ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಜೆಎಸ್ಸ್ ಕಾಲೇಜು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿರುವುದು ಕಾಲೇಜಿಗೆ ಹೆಮ್ಮೆಯ ವಿಚಾರ. ಮುಂದೆಯೂ ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿನಿಯರು ಸಾಧನೆ ಮಾಡಲಿ ಎಂದು ಆಶಿಸಿದರು.</p>.<p>ಜೆಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡಾ ಪ್ರತಿಭೆಗೂ ನೀರೆರದು ಪೋಷಿಸಲಾಗುತ್ತಿದೆ. ಪಠ್ಯದಷ್ಟೆ ಪಠ್ಯೇತ್ತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪರಿಣಾಮ ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದರು.</p>.<p>ಜೆಎಸ್ಎಸ್ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ಮಾತನಾಡಿ, ಕಾಲೇಜಿನ ವಿದ್ಯಾರ್ಥಿನಿ ಹೇಮಾ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ಕಾಲೇಜಿನ ಇತರೆ ವಿದ್ಯಾರ್ಥಿನಿಯರು ಕೂಡ ಉತ್ತಮ ಪ್ರದರ್ಶನ ನೀಡಿರುವುದು ಸಂತಸದ ಸಂಗತಿ ಎಂದರು.</p>.<p>ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಹೇಮಾ ಮಾತನಾಡಿ, ‘ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಪೋಷಕರು ಸ್ಪೂರ್ತಿ’ ಎಂದು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ಮಹದೇವಸ್ವಾಮಿ ಮಾತನಾಡಿ, ಕಾಲೇಜಿನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿನಿಯರು ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶ್ಲಾಘಿಸಿದರು.</p>.<p>ಚಾಮರಾಜನಗರ ವಿಶ್ವವಿದ್ಯಾಲಯ ಕ್ರೀಡಾ ಸಲಹೆ ಸಮಿತಿ ಸದಸ್ಯ ಜಿ.ಬಂಗಾರು ಮಾತನಾಡಿ, ‘ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಶಾಂತರಾಜು ಮಾರ್ಗದರ್ಶನ ಹಾಗೂ ನಿರಂತರವಾಗಿ ಕ್ರೀಡಾಕೂಟಗಳ ಆಯೋಜನೆಯ ಫಲವಾಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಸಹಕಾರಿಯಾಗಿದೆ ಎಂದರು.</p>.<p>ವಿದ್ಯಾರ್ಥಿನಿಯರಾದ ಜಿ.ಸೌಂದರ್ಯ, ಎನ್.ಪಾರ್ವತಿ, ಎ ಐಶ್ವರ್ಯಾ ಮಾತನಾಡಿದರು. ಉಪನ್ಯಾಸಕ ವಿಕ್ರಂ, ಕಾಲೇಜಿನ ವ್ಯವಸ್ಥಾಪಕ ಗುರುಮಲ್ಲಪ್ಪ, ಕ್ರೀಡಾ ಇಲಾಖೆ ಸಹಾಯಕ ವೀರಣ್ಣ, ವಿದ್ಯಾರ್ಥಿನಿರಾದ ಪ್ರಿಯಾ ಪಿ, ನವ್ಯಾ ಎನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>