ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬೇಕು ಎನ್ನುವ ಉದ್ದೇಶದಿಂದ ಹಲವು ಮಂದಿ ಬೆಳಿಗ್ಗೆ 8 ಗಂಟೆಗೆ ಕಚೇರಿ ಮುಂದೆ ತಿಂಡಿ, ಊಟ ಮಾಡದೆ ಸಾಲಿನಲ್ಲಿ ಕಾದು ನಿಂತಿದ್ದರು. ಈ ಮಧ್ಯೆ ಜನರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಈ ಸಂದರ್ಭ ಗೊಂದಲ ಸೃಷ್ಟಿಯಾಯಿತು. ನಂತರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಮಧ್ಯೆ ಪ್ರವೇಶಿಸಿ ಜನರನ್ನು ಸಮಾಧಾನ ಪಡಿಸಿದರು. ಕೆಲವರು ಮಕ್ಕಳ ಸಮೇತ ಆಗಮಿಸಿದ್ದ ಕಾರಣ ಮಹಿಳೆಯರು ಪರದಾಡುವಂತಾಯಿತು.