ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೊಳವೆ ಬಾವಿ ಕೊರೆಸಿ ಮೋಟರ್ ಪಂಪ್ಗಳನ್ನು ನೀಡಿ, ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ಯೋಜನೆಯ ಪಾರದರ್ಶಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನಕ್ಕೆ ಒಬ್ಬ ಗುತ್ತಿಗೆದಾರರನ್ನೇ ಅವಲಂಬಿಸಬೇಕಾಗಿತ್ತು. ಈ ವ್ಯವಸ್ಥೆಯನ್ನು ಬದಲಾಯಿಸಲಾಗಿದ್ದು, ಹಲವು ಗುತ್ತಿಗೆದಾರರು ಲಭ್ಯವಿರುತ್ತಾರೆ. ಫಲಾನುಭವಿಗಳು ತಮಗೆ ಬೇಕಾದ ಗುತ್ತಿಗೆದಾರರನ್ನು ಆಯ್ಕೆ ಮಾಡಿಕೊಂಡು, ಅನುಷ್ಠಾನದ ವಿಳಂಬವನ್ನು ತಪ್ಪಿಸಬಹುದು’ ಎಂದು ಅವರು ಹೇಳಿದರು.