ದಲಿತ ಮುಖಂಡ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಯ ಸಿ.ಎಂ.ಕೃಷ್ಣಮೂರ್ತಿ ಅವರು ಮಾತನಾಡಿ, ‘ಪರಿಶಿಷ್ಟ ಜಾತಿಯ ಪಟ್ಟಿಯಿಂದ ಲಂಬಾಣಿ, ಬೋವಿ, ಕೊರಮ, ಕೊರಚ ಉಪಜಾತಿಗಳನ್ನು ಕೈ ಬಿಡುವಂತೆ ಅಂಬೇಡ್ಕರ್ ಪೀಪಲ್ ಪಾರ್ಟಿ ವತಿಯಿಂದ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಅದನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿ, ಇತ್ತೀಚೆಗೆ ಸುಪ್ರೀಂಕೋರ್ಟ್ ಈ ಬಗ್ಗೆ ವರದಿ ಸಲ್ಲಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗಕ್ಕೆ ಸೂಚಿಸಿದೆ. ಹೀಗಾಗಿ,ಪರಿಶಿಷ್ಟ ಜಾತಿಯ ಹೊಲೆಯ, ಮಾದಿಗರು ಸಂಘಟಿತರಾಗಿ ಜಿಲ್ಲೆಯಿಂದ ಮುಖ್ಯಮಂತ್ರಿಗಳಿಗೆ ದೊಡ್ಡಮಟ್ಟದಲ್ಲಿ ಪತ್ರ ಚಳುವಳಿ ನಡೆಸಬೇಕಾಗಿದೆ’ ಎಂದರು.