ಮುಂಗಾರು ಹಂಗಾಮಿನ ಸಿದ್ಧತೆಗಳ ಸಂಬಂಧ ಕೃಷಿ ಇಲಾಖೆ ಅಧಿಕಾರಿಗಳು, ರಸಗೊಬ್ಬರ ಜಿಲ್ಲಾ ಮಾರಾಟಗಾರರು ಹಾಗೂ ಸರಬರಾಜು ಸಂಸ್ಥೆ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರ, ಬಿತ್ತನೆ ಬೀಜ ಸೇರಿದಂತೆ ಯಾವುದೇ ಪರಿಕರಗಳನ್ನು ರೈತರಿಗೆ ಅಗತ್ಯ ಪ್ರಮಾಣದಲ್ಲಿ ಸರಬರಾಜು ಮಾಡಬೇಕು. ಯಾವುದೇ ಭಾಗದಲ್ಲಿ ಕೊರತೆ ಕಾಡಬಾರದು’ ಎಂದರು.