ಕೋವಿಡ್-19 ನಿರ್ವಹಣೆ ಸಂಬಂಧ ಕರೆಯಲಾಗಿದ್ದ ಆರೋಗ್ಯ ಇಲಾಖೆ, ಪೊಲೀಸ್ ಅಧಿಕಾರಿಗಳು ಹಾಗೂ ಇತರೆ ಇಲಾಖೆಗಳ ನೋಡೆಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಅಂತರ ಜಿಲ್ಲೆಗಳನ್ನು ಸಂಪರ್ಕಿಸುವ ಟಗರುಪುರ, ಸತ್ತೇಗಾಲ, ಬಾಣಳ್ಳಿ, ಕವಲಂದೆ ಬಳಿ, ಬೇಗೂರುಗಳಲ್ಲಿ ಚೆಕ್ ಪೋಸ್ಟ್ಗಳನ್ನು ಕೂಡಲೇ ತೆರೆದು ತಪಾಸಣೆ ಕಾರ್ಯ ಆರಂಭಿಸಬೇಕು. ಪೊಲೀಸ್, ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡವನ್ನು ನಿಯೋಜಿಸಬೇಕು’ ಎಂದರು.