ಜಿಲ್ಲೆಯ ಕೆರೆಗಳಿಗೆ ಸುತ್ತೂರು ಗ್ರಾಮದ ಬಳಿ ಕಬಿನಿ ನದಿಯಿಂದ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆಯನ್ನು ಶನಿವಾರ ನಡೆಸಿದ ಅವರು, ‘ಉಮ್ಮತ್ತೂರು ಕೆರೆಗೆ ನೀರು ತುಂಬಿಸಲು ಬಾಕಿ ಇರುವ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಈಗಾಗಲೇ 34 ಕಿ.ಮೀ ಪೈಪ್ಲೈನ್ ಕಾಮಗಾರಿ ಪೈಕಿ ಗ್ರ್ಯಾವಿಟಿ ಲೈನ್ ಕಾಮಗಾರಿಯು 20 ಕಿ.ಮೀ ಪೂರ್ಣಗೊಂಡಿದೆ. ರೈಸಿಂಗ್ ಮೆನ್ ಲೈನ್ ಕಾಮಗಾರಿಯನ್ನು 14 ಕಿ.ಮೀ ಪೂರ್ಣಗೊಳಿಸಲಾಗಿದೆ. ಬಾಕಿ 900 ಮೀಟರ್ ಪೈಪ್ಲೈನ್ ಅಳವಡಿಕೆ ಕಾಮಗಾರಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಬಳಿ ಆಗಬೇಕಿದೆ. ಈ ಸಂಬಂಧ ಇರುವ ತೊಡಕುಗಳನ್ನು ಪರಿಹರಿಸಿಕೊಂಡು ತುರ್ತಾಗಿ ಪೈಪ್ಲೈನ್ ಅಳವಡಿಕೆ ಕಾಮಗಾರಿಯನ್ನು ಆರಂಭಿಸಿ ಪೂರ್ಣಗೊಳಿಸಬೇಕು’ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.