<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಪೂರಕವಾಗಿ ಸಹಕರಿಸಬೇಕು ಎಂದುಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮನವಿ ಮಾಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆಸಂಬಂಧ ಗುರುವಾರಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಬೇಕು. ಈ ನಿಟ್ಟಿನಲ್ಲಿ ಪೂರಕ ಸಹಕಾರ ಅಗತ್ಯವಾಗಿದೆ. ಸೌಹರ್ದತೆ ತೋರುವ ಮೂಲಕ ಹಬ್ಬದ ಆಚರಣೆಯಾಗಬೇಕು ಎಂದು ಆಶಿಸಿದರು.</p>.<p>ಇದೇಸಂದರ್ಭದಲ್ಲಿಸಭೆಯಲ್ಲಿ ಹಾಜರಿದ್ದ ಮುಖಂಡರು ಮಾತನಾಡಿ, ‘ಹಬ್ಬದ ಸಿದ್ಧತೆಗಾಗಿ ಕುಡಿಯುವ ನೀರು ಸಮರ್ಪಕ ವಿದ್ಯುತ್ ಸರಬರಾಜಿಗೆ ಕ್ರಮ ತೆಗೆದುಕೊಳ್ಳಬೇಕು’ ಎಂದುಮನವಿ ಮಾಡಿದರು.</p>.<p>‘ನಗರದ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೈರ್ಮಲ್ಯ ಕಾಪಾಡಲು ನಗರಸಭೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು’ ಎಂದು ಕಾವೇರಿ ಅವರು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಮಾತನಾಡಿ, ‘ಶಾಂತಿಯುತವಾಗಿ ಹಬ್ಬದ ಆಚರಣೆಯಾಗಲಿ. ಸೌಹರ್ದತೆ ಮನೋಭಾವ ಮುಂದುವರೆಯಬೇಕು’ ಎಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಉಪ ವಿಭಾಗಧಿಕಾರಿ ನಿಖಿತ ಎಂ.ಚಿನ್ನಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಪೂರಕವಾಗಿ ಸಹಕರಿಸಬೇಕು ಎಂದುಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮನವಿ ಮಾಡಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆಸಂಬಂಧ ಗುರುವಾರಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಬೇಕು. ಈ ನಿಟ್ಟಿನಲ್ಲಿ ಪೂರಕ ಸಹಕಾರ ಅಗತ್ಯವಾಗಿದೆ. ಸೌಹರ್ದತೆ ತೋರುವ ಮೂಲಕ ಹಬ್ಬದ ಆಚರಣೆಯಾಗಬೇಕು ಎಂದು ಆಶಿಸಿದರು.</p>.<p>ಇದೇಸಂದರ್ಭದಲ್ಲಿಸಭೆಯಲ್ಲಿ ಹಾಜರಿದ್ದ ಮುಖಂಡರು ಮಾತನಾಡಿ, ‘ಹಬ್ಬದ ಸಿದ್ಧತೆಗಾಗಿ ಕುಡಿಯುವ ನೀರು ಸಮರ್ಪಕ ವಿದ್ಯುತ್ ಸರಬರಾಜಿಗೆ ಕ್ರಮ ತೆಗೆದುಕೊಳ್ಳಬೇಕು’ ಎಂದುಮನವಿ ಮಾಡಿದರು.</p>.<p>‘ನಗರದ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೈರ್ಮಲ್ಯ ಕಾಪಾಡಲು ನಗರಸಭೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು’ ಎಂದು ಕಾವೇರಿ ಅವರು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಮಾತನಾಡಿ, ‘ಶಾಂತಿಯುತವಾಗಿ ಹಬ್ಬದ ಆಚರಣೆಯಾಗಲಿ. ಸೌಹರ್ದತೆ ಮನೋಭಾವ ಮುಂದುವರೆಯಬೇಕು’ ಎಂದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಉಪ ವಿಭಾಗಧಿಕಾರಿ ನಿಖಿತ ಎಂ.ಚಿನ್ನಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>