ಕೋವಿಡ್ಗೆ ನಿರ್ದಿಷ್ಟ ಲಸಿಕೆ ಇಲ್ಲ. ಆದರೆ, ಔಷಧ ಉಪಚಾರದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗಿದೆ. ಜಿಲ್ಲಾಡಳಿತ ಕೂಡಾ ಸೋಂಕಿತರ ಆರೈಕೆಗೆ ವಿಶೇಷ ಕಾಳಜಿ ವಹಿಸಿ ಚಿಕಿತ್ಸಾ ಕ್ರಮಗಳಿಗೆ ಸಕಲ ವ್ಯವಸ್ಥೆ ಕೈಗೊಂಡಿದೆ. ಇದರ ನಿಯಂತ್ರಣಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಜ್ವರ, ಉಸಿರಾಟ ತೊಂದರೆ, ಶೀತ, ಕೆಮ್ಮು ಕಾಣಿಸಿಕೊಂಡಲ್ಲಿ ಅಂತಹವರನ್ನು ಗ್ರಾಮ, ವಾರ್ಡ್ವಾರು ಟಾಸ್ಕ್ ಫೋರ್ಸ್ ಸಮಿತಿಯವರು, ಸ್ವಯಂ ಸೇವಕರು ಗುರುತಿಸಿ ಕೂಡಲೆ ವೈದ್ಯರ ಬಳಿ ಆರೋಗ್ಯ ತಪಾಸಣೆಗೆ ಕಳುಹಿಸಿಕೊಡುವ ಮೂಲಕ ಸಹಕಾರ ನೀಡಬೇಕು’ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.