ಜಿಲ್ಲಾಧಿಕಾರಿ ಅವರು ಮಾತ್ರವಲ್ಲದೇ, ಆಯಾ ತಾಲ್ಲೂಕಿನ ತಹಶೀಲ್ದಾರ್ ಅವರು ಕೂಡ ಒಂದೊಂದು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಕಸಬಾ ಹೋಬಳಿಯ ಬದನಗುಪ್ಪೆ, ಗುಂಡ್ಲಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಬೆಟ್ಟಹಳ್ಳಿ ಗ್ರಾಮ, ಯಳಂದೂರು ತಾಲ್ಲೂಕಿನ ಅಗರ ಹೋಬಳಿಯ ಕೆಸ್ತೂರು ಗ್ರಾಮ, ಹನೂರು ತಾಲ್ಲೂಕಿನ ಕಸಬಾ ಹೋಬಳಿಯ ಬೈರನತ್ತ ಗ್ರಾಮದಲ್ಲಿ ತಹಶಿಲ್ದಾರಾರು ಅಹವಾಲುಗಳನ್ನು ಆಲಿಸಲಿದ್ದಾರೆ.