ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ‘ಜಿಲ್ಲಾ ಕೇಂದ್ರದಲ್ಲಿ ವಸತಿ ಸಮಸ್ಯೆ ಬಹಳ ಇದೆ. ನಗರ ಅಭಿವೃದ್ದಿಯಾಗಬೇಕಾಗಿದೆ. ಮೂಲ ಸೌಕರ್ಯಗಳನ್ನು ಹೊಂದಿರುವ ಬಡಾವಣೆ ನಿರ್ಮಾಣ ಮಾಡಲು ವಸತಿ ಸಚಿವ ವಿ. ಸೋಮಣ್ಣ ಅವರು ಆಸಕ್ತಿ ತೋರಿದ್ದಾರೆ. ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಕೂಡ ಜಮೀನು ಕೊಡಿಸಲು ಮಾಲೀಕರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಪ್ರದೇಶ ರೈಲ್ವೆ ನಿಲ್ದಾಣ, ಖಾಸಗಿ ಬಸ್ ನಿಲ್ಧಾಣ ಹಾಗೂ ಕೆಎಸ್ಆರ್ಟಿಸಿ ಬಸ್, ಕ್ರೀಡಾಂಗಣಕ್ಕೆ ಹತ್ತಿರವಾಗಿದೆ’ ಎಂದರು.