<p><strong>ಚಾಮರಾಜನಗರ: </strong>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶುಕ್ರವಾರ ಬೆಳಿಗ್ಗೆ ನಗರಸಭೆಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.</p>.<p>ಬೆಳಿಗ್ಗೆ 10.10ರ ಸುಮಾರಿಗೆ ನಗರಸಭೆ ಕಚೇರಿಗೆ ಭೇಟಿ ನೀಡಿದ ಅವರು ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದರು. ಆ ಹೊತ್ತಿಗೆ ಹೆಚ್ಚಿನ ಸಿಬ್ಬಂದಿ ಕಚೇರಿಗೆ ಬಂದಿರಲಿಲ್ಲ. ನಂತರ ಆಯುಕ್ತ ರಾಜಣ್ಣ ಅವರ ಕೊಠಡಿಗೆ ತೆರಳಿದರು.</p>.<p>ಕಚೇರಿಯ ಮೊಗಸಾಲೆಯಲ್ಲಿ ಕಪಾಟು ಹಾಗೂ ಇನ್ನಿತರ ವಸ್ತುಗಳನ್ನು ಇಟ್ಟಿದ್ದನ್ನು ಗಮನಿಸಿದ ರವಿ, ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಬೇರೆ ಕಡೆ ಇರಿಸುವಂತೆ ಸೂಚಿಸಿದರು.</p>.<p>ಸ್ವಚ್ಛತೆ ಹಾಗೂ ಗಾಳಿ ಬೆಳಕಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಇಲ್ಲಿ ಸ್ವಚ್ಛತೆ ಇಲ್ಲ, ಗಾಳಿ ಬೆಳಕು ಸಮರ್ಪಕವಾಗಿಲ್ಲದೆ, ದಾಸ್ತಾನು ಕೊಠಡಿಯಂತೆ ಇದೆ. ನಗರಸಭೆ ಕಚೇರಿಯೇ ಈ ರೀತಿ ಇದ್ದರೆ, ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಹೇಗೆ ಮೂಡಿಸುತ್ತೀರಿ’ ಎಂದು ಪ್ರಶ್ನಿಸಿದರು.</p>.<p>ತಡವಾಗಿ ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೂ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು. ಕಚೇರಿ ಎಷ್ಟು ಗಂಟೆಗೆ ಆರಂಭವಾಗುತ್ತದೆ ಎಂಬುದು ತಿಳಿದಿದೆಯೇ? ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅರಿವು ಇದೆಯೇ? ತಡವಾಗಿ ಬರಲು ನಾಚಿಕೆ ಆಗುವುದಿಲ್ಲವೇ’ ಎಂದು ಖಾರವಾಗಿ ಪ್ರಶ್ನಿಸಿದರು.</p>.<p>ತಡವಾಗಿ ಬಂದವರಿಗೆ ನೋಟಿಸ್ ಜಾರಿ ಮಾಡುವಂತೆ ಆಯುಕ್ತರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶುಕ್ರವಾರ ಬೆಳಿಗ್ಗೆ ನಗರಸಭೆಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.</p>.<p>ಬೆಳಿಗ್ಗೆ 10.10ರ ಸುಮಾರಿಗೆ ನಗರಸಭೆ ಕಚೇರಿಗೆ ಭೇಟಿ ನೀಡಿದ ಅವರು ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದರು. ಆ ಹೊತ್ತಿಗೆ ಹೆಚ್ಚಿನ ಸಿಬ್ಬಂದಿ ಕಚೇರಿಗೆ ಬಂದಿರಲಿಲ್ಲ. ನಂತರ ಆಯುಕ್ತ ರಾಜಣ್ಣ ಅವರ ಕೊಠಡಿಗೆ ತೆರಳಿದರು.</p>.<p>ಕಚೇರಿಯ ಮೊಗಸಾಲೆಯಲ್ಲಿ ಕಪಾಟು ಹಾಗೂ ಇನ್ನಿತರ ವಸ್ತುಗಳನ್ನು ಇಟ್ಟಿದ್ದನ್ನು ಗಮನಿಸಿದ ರವಿ, ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಬೇರೆ ಕಡೆ ಇರಿಸುವಂತೆ ಸೂಚಿಸಿದರು.</p>.<p>ಸ್ವಚ್ಛತೆ ಹಾಗೂ ಗಾಳಿ ಬೆಳಕಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಇಲ್ಲಿ ಸ್ವಚ್ಛತೆ ಇಲ್ಲ, ಗಾಳಿ ಬೆಳಕು ಸಮರ್ಪಕವಾಗಿಲ್ಲದೆ, ದಾಸ್ತಾನು ಕೊಠಡಿಯಂತೆ ಇದೆ. ನಗರಸಭೆ ಕಚೇರಿಯೇ ಈ ರೀತಿ ಇದ್ದರೆ, ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಹೇಗೆ ಮೂಡಿಸುತ್ತೀರಿ’ ಎಂದು ಪ್ರಶ್ನಿಸಿದರು.</p>.<p>ತಡವಾಗಿ ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೂ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು. ಕಚೇರಿ ಎಷ್ಟು ಗಂಟೆಗೆ ಆರಂಭವಾಗುತ್ತದೆ ಎಂಬುದು ತಿಳಿದಿದೆಯೇ? ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅರಿವು ಇದೆಯೇ? ತಡವಾಗಿ ಬರಲು ನಾಚಿಕೆ ಆಗುವುದಿಲ್ಲವೇ’ ಎಂದು ಖಾರವಾಗಿ ಪ್ರಶ್ನಿಸಿದರು.</p>.<p>ತಡವಾಗಿ ಬಂದವರಿಗೆ ನೋಟಿಸ್ ಜಾರಿ ಮಾಡುವಂತೆ ಆಯುಕ್ತರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>