<p><strong>ಗುಂಡ್ಲುಪೇಟೆ: </strong>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ, ಗುಂಡ್ರೆ ವಲಯದ ಆನೆ ತಡೆ ಕಂದಕದಲ್ಲಿನ ಪೊದೆಯೊಂದರಲ್ಲಿ ಮಂಗಳವಾರ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.</p>.<p>‘5ರಿಂದ 6 ವರ್ಷ ಪ್ರಾಯದ ಹುಲಿಯ ಮೃತ ದೇಹ ಪರಿಶೀಲಿಸಿದಾಗ, ಮೂರ್ನಾಲ್ಕು ದಿನದ ಹಿಂದೆ ಮುಳ್ಳು ಹಂದಿಯನ್ನು ಬೇಟೆಯಾಡಲು ಯತ್ನಿಸಿದೆ. ಕಾದಾಟದಲ್ಲಿ ಹುಲಿಯ ಮುಂಗಾಲಿಗೆ ಹಂದಿಯ ಮುಳ್ಳುಗಳು ಚುಚ್ಚಿಕೊಂಡಿವೆ. ನಂತರ ಸಣ್ಣ-ಪುಟ್ಟ ಪ್ರಾಣಿಗಳನ್ನು ಸುಲಭವಾಗಿ ಬೇಟೆಯಾಡಲು ಕಂದಕದ ಪೊದೆಯೊಂದರಲ್ಲಿ ಪ್ರಯತ್ನಿಸುತ್ತಿದ್ದಾಗ, ಹುರುಳಿಗೆ ಸಿಲುಕಿ ಒದ್ದಾಡಿದೆ. ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿದೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್ ಮಾಹಿತಿ ನೀಡಿದ್ದಾರೆ.</p>.<p>ಗುಂಡ್ರೆ ವಲಯದಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರಾಣ ಸೇರಿದಂತೆ ಇಲಾಖೆಯ ಇನ್ನಿತರೆ ಶ್ವಾನ ಕರೆಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೃತ ಹುಲಿಯ ವಿವಿಧ ಅಂಗಾಂಗಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂಬುದು ತಿಳಿದು ಬಂದಿದೆ.</p>.<p>ಪಶು ವೈದ್ಯಾಧಿಕಾರಿ ಡಾ.ವಾಸೀಂ ಮಿರ್ಜಾ ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ನಿಯಮದ ಪ್ರಕಾರ ಹುಲಿಯ ಮೃತ ದೇಹವನ್ನು ಸುಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ, ಗುಂಡ್ರೆ ವಲಯದ ಆನೆ ತಡೆ ಕಂದಕದಲ್ಲಿನ ಪೊದೆಯೊಂದರಲ್ಲಿ ಮಂಗಳವಾರ ಗಂಡು ಹುಲಿಯ ಮೃತ ದೇಹ ಪತ್ತೆಯಾಗಿದೆ.</p>.<p>‘5ರಿಂದ 6 ವರ್ಷ ಪ್ರಾಯದ ಹುಲಿಯ ಮೃತ ದೇಹ ಪರಿಶೀಲಿಸಿದಾಗ, ಮೂರ್ನಾಲ್ಕು ದಿನದ ಹಿಂದೆ ಮುಳ್ಳು ಹಂದಿಯನ್ನು ಬೇಟೆಯಾಡಲು ಯತ್ನಿಸಿದೆ. ಕಾದಾಟದಲ್ಲಿ ಹುಲಿಯ ಮುಂಗಾಲಿಗೆ ಹಂದಿಯ ಮುಳ್ಳುಗಳು ಚುಚ್ಚಿಕೊಂಡಿವೆ. ನಂತರ ಸಣ್ಣ-ಪುಟ್ಟ ಪ್ರಾಣಿಗಳನ್ನು ಸುಲಭವಾಗಿ ಬೇಟೆಯಾಡಲು ಕಂದಕದ ಪೊದೆಯೊಂದರಲ್ಲಿ ಪ್ರಯತ್ನಿಸುತ್ತಿದ್ದಾಗ, ಹುರುಳಿಗೆ ಸಿಲುಕಿ ಒದ್ದಾಡಿದೆ. ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿದೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಟೇಶ್ ಮಾಹಿತಿ ನೀಡಿದ್ದಾರೆ.</p>.<p>ಗುಂಡ್ರೆ ವಲಯದಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರಾಣ ಸೇರಿದಂತೆ ಇಲಾಖೆಯ ಇನ್ನಿತರೆ ಶ್ವಾನ ಕರೆಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೃತ ಹುಲಿಯ ವಿವಿಧ ಅಂಗಾಂಗಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂಬುದು ತಿಳಿದು ಬಂದಿದೆ.</p>.<p>ಪಶು ವೈದ್ಯಾಧಿಕಾರಿ ಡಾ.ವಾಸೀಂ ಮಿರ್ಜಾ ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ನಿಯಮದ ಪ್ರಕಾರ ಹುಲಿಯ ಮೃತ ದೇಹವನ್ನು ಸುಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>