‘ಮಂಗಳವಾರ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾಗ ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ಕಂಪ್ಯೂಟರ್ ಆಪರೇಟರ್, ಚೇತನ್ ಅವರನ್ನು ಕರೆದು ಕಚೇರಿ ಕಡತ ಲೆಕ್ಕ ನಿರ್ವಹಣೆ ಬಗ್ಗೆ ವಿಚಾರಣೆ ಮಾಡಲಾಯಿತು. ಅದಕ್ಕೆ ಆತ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿ ಕೊಲೆ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ನ.3 ರಂದು ಆತ್ಮ ರಕ್ಷಣೆಗಾಗಿ ಹೊರಗುತ್ತಿಗೆ ನೌಕರ ಚೇತನ್ ಮೇಲೆ ಕಾನೂನು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡುತಿದ್ದೇನೆ’ ಎಂದು ವಿವರಿಸಿದ್ದಾರೆ.