‘ತಾನು ಬೆಳೆಯುವ ಜೊತೆಗೆ ಇತರರನ್ನು ಬೆಳಸುವ ನಾಯಕತ್ವ ಗುಣ ಮೈಗೂಡಿಸಿಕೊಂಡಿದ್ದ ಉಪಾಧ್ಯಾಯರು ಸರಳ ಜೀವಿಯಾಗಿದ್ದರು. ದೀನರ ಬಗ್ಗೆ ದಯೆ, ಕಾಳಜಿ ಹೊಂದಿ ಅವರ ಏಳಿಗೆಗಾಗಿ ತನ್ನ ಸರ್ವಸ್ವವನ್ನು ಮುಡಿಪಾಗಿಟ್ಟರು. ಭಾರತೀಯ ಪರಂಪರೆಯ ಮೂಲತತ್ವವನ್ನು ಜನರಿಗೆ ತಿಳಿಸಲು ರಾಷ್ಟ್ರಧರ್ಮ, ಪಾಂಚಜನ್ಯ, ಸ್ವದೇಶಿ ಪತ್ರಿಕೆಗಳನ್ನು ಹುಟ್ಟುಹಾಕಿದರು. ಪಂಡಿತ್ ದೀನದಯಾಳರ ಆದರ್ಶ ಜೀವನ, ತಾತ್ವಿಕ ಚಿಂತನೆ, ಉದಾರ ವಿಚಾರಧಾರೆಗಳನ್ನು ಇಂದಿನ ಯುವಪೀಳೆಗೆ ಅಳವಡಿಸಿಕೊಳ್ಳಬೇಕು’ ಎಂದು ಪ್ರದೀಪ್ಕುಮಾರ್ ತಿಳಿಸಿದರು.