ಹನೂರು: ನೀರು ಮತ್ತು ಆಹಾರ ಅರಸಿ ಬಂದಿದ್ದ ಜಿಂಕೆಯೊಂದುತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಶನಿವಾರ ಮುಂಜಾನೆ ಬೀದಿನಾಯಿಗಳ ದಾಳಿಗೆ ತುತ್ತಾಗಿ ಮೃತಪಟ್ಟಿದೆ.
ಶನಿವಾರ ಬೆಳಿಗ್ಗೆ ಜಮಿನಿಗೆ ನೀರು ಕುಡಿಯಲು ಬಂದಾಗ ಬೀದಿನಾಯಿಗಳ ಹಿಂಡು ಹಿಂಬಾಲಿಸಿದೆ. ಅದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಏಕಾಏಕಿ ನಾಯಿಗಳು ದಾಳಿ ನಡೆಸಿವೆ. ಬಳಿಕ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಗೆ ಗ್ರಾಮಸ್ಥರು ನೀರು ಕುಡಿಸಿ ಸಂತೈಸಿದ್ದಾರೆ. ಆದರೆ ಜಿಂಕೆ ಬದುಕುಳಿಯಲಿಲ್ಲ.
ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಮಹಜರು ನಡೆಸಿ ಜಿಂಕೆ ಕಳೇಬರವನ್ನು ತೆಗೆದುಕೊಂಡು ಹೋದರು.