ಹೆಚ್ಚಿದ ಹುಲಿ-ಚಿರತೆ ಹಾವಳಿ:
ಪಡಗೂರು, ಪರಮಾಪುರ ಸುತ್ತಮುತ್ತಲ ಗ್ರಾಮಗಳಲ್ಲಿ ಹುಲಿ ಹಾಗೂ ಚಿರತೆ ಹಾವಳಿ ಹೆಚ್ಚಿದ್ದು, ಪ್ರತಿನಿತ್ಯ ಜಾನುವಾರು ಮೇಲೆ ದಾಳಿ ಮಾಡುತ್ತಿವೆ. ಇದರಿಂದ ರಾತ್ರಿ ವೇಳೆ ಜಮೀನುಗಳಿಗೆ ಹೋಗಲು ಭಯ ಪಡುವಂತಾಗಿದೆ. ಆದ್ದರಿಂದ ಸಂಬಂಧ ಪಟ್ಟ ಅರಣ್ಯ ಇಲಾಖೆ ಮೇಲಾಧಿಕಾರಿಗಳು ಹಾಗೂ ಶಾಸಕ ಎಚ್.ಎಂ.ಗಣೇಶಪ್ರಸಾದ್ ಇತ್ತ ಗಮನ ಹರಿಸಿ ಹುಲಿ ಮತ್ತು ಚಿರತೆ ಸೆರೆಗೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಇಲ್ಲದಿದ್ದರೆ ಅರಣ್ಯಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತರ ಮುಖಂಡರು ಎಚ್ಚರಿಕೆ ನೀಡಿದ್ದಾರೆ.