‘ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ನಮ್ಮ ಸಮುದಾಯ ಹಿಂದೆ ಉಳಿದಿದೆ. ಆಳುವವರು ಹಾಗೂ ಪರಿಶಿಷ್ಟ ಜಾತಿಯ ಸಮುದಾಯದವರೇ ನಮ್ಮನ್ನು ತುಳಿಯುತ್ತಿದ್ದಾರೆ. ರಾಜಕೀಯದಲ್ಲಿ ನಮ್ಮವರಿಗೆ ಅವಕಾಶವೇ ಇಲ್ಲ. ಪರಿಶಿಷ್ಟ ಜಾತಿಯಲ್ಲೇ ಇರುವ ಬೆರಳೆಣಿಕೆಯ ಜಾತಿಗಳು ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿವೆ. ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಲು ಎಲ್ಲ ಸರ್ಕಾರಗಳು ವಿಫಲವಾಗಿವೆ’ ಎಂದರು.