ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಮಹರ್ಷಿಗಳ ಹೆಸರಿನ ಸಂಸ್ಥೆಯೊಂದರಲ್ಲಿ ಅವ್ಯವಹಾರ ನಡೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ₹187 ಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಸಮಾಜದವರಾಗಿದ್ದುಕೊಂಡು ಸಮಾಜಕ್ಕೆ ಅನ್ಯಾಯ ಮಾಡುವ ಕೆಲಸ ಅವರು ಮಾಡಲಾರರು. ಅವರ ಮೇಲೆ ಒತ್ತಡ ಹಾಕಿದವರು ಬೇರೆ ಯಾರೋ ಇದ್ದಾರೆ. ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.