‘ರೈತ ಸಂಘದ ಅಧ್ಯಕ್ಷ ಎಂದು ಹೇಳಿಕೊಂಡು ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ.ಸಣ್ಣ ರೈತರು ತರಕಾರಿ, ಹೂವು, ರೇಷ್ಮೆ ಮತ್ತು ಹಾಲು ಸಾಗಾಟಕ್ಕೆ ಸಾರಿಗೆ ಸಂಸ್ಥೆ ಬಸ್ಸುಗಳನ್ನು ಅವಲಂಬಿಸಿದ್ದರು. ಆದರೆ ಈಗ, ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆಯಿಂದ ನಡೆಯುತ್ತಿರುವ ಮುಷ್ಕರವು ಸಣ್ಣ ರೈತರನ್ನು ಕಷ್ಟಕ್ಕೆ ತಳ್ಳಿದೆ. ರೈತ ಪ್ರಯಾಣಿಕರ ಕಷ್ಟ ನೋಡಲಾಗದೆ ಕರ್ತವ್ಯಕ್ಕೆ ಹಾಜರಾಗುವ ಚಾಲಕರು ಹಾಗೂ ನಿರ್ವಾಹಕರ ಮೇಲೆ ಕೋಡಿಹಳ್ಳಿ ಚಂದ್ರಶೇಖರ್ ಪ್ರಚೋದನೆಯಿಂದ ಹಲ್ಲೆಗಳಾಗುತ್ತಿವೆ. ಇಂತಹ ಸಂಚು, ಪಿತೂರಿಗಳಿಂದ ರೈತರು ವಂಚನೆಗೊಳಗಾಗಿದ್ದರು. ಇದೀಗ ಸಾರಿಗೆ ನೌಕರರು ಕೋಡಿಹಳ್ಳಿ ಚಂದ್ರಶೇಖರ್ ವಿಷಜಾಲಕ್ಕೆ ಸಿಲುಕಿದ್ದಾರೆ’ ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.