‘ಕುದೇರಿನಲ್ಲಿರುವ ಹಾಲು ಒಕ್ಕೂಟದಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳದೆ ₹10 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಲಾಗಿದೆ. ಆನ್ ಲೈನ್ ಮೂಲಕ 4,892 ಅರ್ಜಿಗಳನ್ನು ಸ್ವೀಕರಿಸಿ 3,124 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ 72 ಹುದ್ದೆಗಳನ್ನು ತುಂಬಲು ಒಬ್ಬರಿಂದ ₹30ರಿಂದ ₹40 ಲಕ್ಷ ಹಣ ಪಡೆದು ನೇಮಕಾತಿ ಮಾಡಲಾಗಿದೆ. ಇದರಿಂದ ಸಾವಿರಾರು ಜನ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ತನಿಖೆ ನೆಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ಈವರೆಗೂ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ' ಎಂದು ಮನವಿಯಲ್ಲಿ ದೂರಲಾಗಿದೆ.