<p><strong>ಚಾಮರಾಜನಗರ</strong>: ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ನಗರಗಳಿಂದ ಊರುಗಳಿಗೆ ವಾಪಸ್ ಬಂದಿರುವ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗದಲ್ಲಿ ತೊಡಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗದಮ ಅಧ್ಯಕ್ಷ ಆರ್.ರಘು ಕೌಟಿಲ್ಯ ಅವರು ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೌಶಲ ತರಬೇತಿ ಕೊಡಿಸಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿನ ಅರ್ಹ ಫಲಾನುಭವಿಗಳಿಗೆ ನಿಗಮದಿಂದ ದೊರೆಯುವ ಸವಲತ್ತುಗಳು ಸರಿಯಾಗಿ ತಲುಪುತ್ತಿವೆಯೇ ಎಂಬುದನ್ನು ಸಮಾಲೋಚಿಸಲು ಜಿಲ್ಲೆಗೆ ಭೇಟಿ ನೀಡಿದ್ದೇನೆ’ ಎಂದರು.</p>.<p>‘ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ರಮಿಕ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. 2019–20ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ 585 ಫಲಾನುಭವಿಗಳಿಗೆ ₹3.77 ಕೋಟಿ ಸಾಲ ನೀಡಲು ಗುರಿ ಹೊಂದಲಾಗಿದ್ದು, ಇದರಲ್ಲಿ 525 ಮಂದಿಗೆ ₹1.98 ಕೋಟಿ ಸಾಲ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಹಿಂದುಳಿದ ವರ್ಗಗಳ ಕಟ್ಟಕಡೆಯ ಜನಾಂಗದವರಿಗೂ ಈ ನಿಗಮದಿಂದ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು. ಇದುವರೆಗೂ 6,791 ಮಂದಿಗೆ ₹5.20 ಕೋಟಿ ಸಹಾಯಧನ ಹಾಗೂ ₹15.91 ಕೋಟಿ ಸಾಲ ನೀಡಲಾಗಿದೆ’ ಎಂದು ರಘು ಅವರು ವಿವರಿಸಿದರು.</p>.<p>‘ಇ-ವಾಣಿಜ್ಯ ಸಂಸ್ಥೆಗಳ ಮೂಲಕ ಮನೆ ಬಾಗಿಲಿಗೆ ಉತ್ಪನ್ನಗಳನ್ನು ಸರಬರಾಜು ಮಾಡುವ 1,000 ಯುವಕರಿಗೆ ಬೈಕ್ ಕೊಳ್ಳಲು ನಿಗಮದಿಂದ ₹25 ಸಾವಿರ ಸಹಾಯಧನವನ್ನು ಬ್ಯಾಂಕ್ಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ನಟರಾಜೇಗೌಡ, ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಮುಖಂಡ ಪುಟ್ಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ನಗರಗಳಿಂದ ಊರುಗಳಿಗೆ ವಾಪಸ್ ಬಂದಿರುವ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗದಲ್ಲಿ ತೊಡಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗದಮ ಅಧ್ಯಕ್ಷ ಆರ್.ರಘು ಕೌಟಿಲ್ಯ ಅವರು ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೌಶಲ ತರಬೇತಿ ಕೊಡಿಸಲು ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿನ ಅರ್ಹ ಫಲಾನುಭವಿಗಳಿಗೆ ನಿಗಮದಿಂದ ದೊರೆಯುವ ಸವಲತ್ತುಗಳು ಸರಿಯಾಗಿ ತಲುಪುತ್ತಿವೆಯೇ ಎಂಬುದನ್ನು ಸಮಾಲೋಚಿಸಲು ಜಿಲ್ಲೆಗೆ ಭೇಟಿ ನೀಡಿದ್ದೇನೆ’ ಎಂದರು.</p>.<p>‘ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ರಮಿಕ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ. 2019–20ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ 585 ಫಲಾನುಭವಿಗಳಿಗೆ ₹3.77 ಕೋಟಿ ಸಾಲ ನೀಡಲು ಗುರಿ ಹೊಂದಲಾಗಿದ್ದು, ಇದರಲ್ಲಿ 525 ಮಂದಿಗೆ ₹1.98 ಕೋಟಿ ಸಾಲ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಹಿಂದುಳಿದ ವರ್ಗಗಳ ಕಟ್ಟಕಡೆಯ ಜನಾಂಗದವರಿಗೂ ಈ ನಿಗಮದಿಂದ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು. ಇದುವರೆಗೂ 6,791 ಮಂದಿಗೆ ₹5.20 ಕೋಟಿ ಸಹಾಯಧನ ಹಾಗೂ ₹15.91 ಕೋಟಿ ಸಾಲ ನೀಡಲಾಗಿದೆ’ ಎಂದು ರಘು ಅವರು ವಿವರಿಸಿದರು.</p>.<p>‘ಇ-ವಾಣಿಜ್ಯ ಸಂಸ್ಥೆಗಳ ಮೂಲಕ ಮನೆ ಬಾಗಿಲಿಗೆ ಉತ್ಪನ್ನಗಳನ್ನು ಸರಬರಾಜು ಮಾಡುವ 1,000 ಯುವಕರಿಗೆ ಬೈಕ್ ಕೊಳ್ಳಲು ನಿಗಮದಿಂದ ₹25 ಸಾವಿರ ಸಹಾಯಧನವನ್ನು ಬ್ಯಾಂಕ್ಗಳ ಸಹಯೋಗದೊಂದಿಗೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ನಟರಾಜೇಗೌಡ, ಪ್ರಧಾನ ಕಾರ್ಯದರ್ಶಿ ಹೊನ್ನೂರು ಮಹದೇವಸ್ವಾಮಿ, ಮುಖಂಡ ಪುಟ್ಟರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>