<p><strong>ಚಾಮರಾಜನಗರ:</strong> ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಈಚೆಗೆ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.</p>.<p>ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಯೋಜಿದ್ದ ಕ್ರೀಡಾಕೂಟಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್ ಚಾಲನೆ ನೀಡಿ ಮಾತನಾಡಿ, ದೇವರಾಜ ಅರಸು ಅವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ದೆ ಏರ್ಪಡಿಸಲಾಗಿದೆ.</p>.<p>100, 200 ಮೀ ಓಟ, ಉದ್ದ ಹಾಗೂ ಎತ್ತರ ಜಿಗಿತ, ಗುಂಡು ಎಸೆತ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ವಿಜೇತ ಸ್ಪರ್ಧಿಗಳಿಗೆ ಜಯಂತಿಯಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಈ ಸಂದರ್ಭ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ನಿಲಯ ಪಾಲಕ ಲಿಂಗಣ್ಣ, ಎಚ್.ಬಿ.ಸ್ವಾಮಿ, ಅಶ್ವಥ್ ಮಂಜುನಾಥ್, ಚಿನ್ನಸ್ವಾಮಿ, ಯುವ ಸ್ಪಂದನಾ ಕೇಂದ್ರದ ಗುರುರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ 109ನೇ ಜನ್ಮ ದಿನಚಾರಣೆ ಅಂಗವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಈಚೆಗೆ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಿತು.</p>.<p>ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆಯೋಜಿದ್ದ ಕ್ರೀಡಾಕೂಟಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕುಮಾರ್ ಚಾಲನೆ ನೀಡಿ ಮಾತನಾಡಿ, ದೇವರಾಜ ಅರಸು ಅವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ದೆ ಏರ್ಪಡಿಸಲಾಗಿದೆ.</p>.<p>100, 200 ಮೀ ಓಟ, ಉದ್ದ ಹಾಗೂ ಎತ್ತರ ಜಿಗಿತ, ಗುಂಡು ಎಸೆತ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ವಿಜೇತ ಸ್ಪರ್ಧಿಗಳಿಗೆ ಜಯಂತಿಯಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಈ ಸಂದರ್ಭ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗರಾಜು, ನಿಲಯ ಪಾಲಕ ಲಿಂಗಣ್ಣ, ಎಚ್.ಬಿ.ಸ್ವಾಮಿ, ಅಶ್ವಥ್ ಮಂಜುನಾಥ್, ಚಿನ್ನಸ್ವಾಮಿ, ಯುವ ಸ್ಪಂದನಾ ಕೇಂದ್ರದ ಗುರುರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>