<p><strong>ಚಾಮರಾಜನಗರ</strong>: ವಿದ್ಯಾರ್ಥಿಗಳು ಮೊಬೈಲ್ ಹವ್ಯಾಸ ಹೆಚ್ಚಾಗಿ ಬೆಳೆಸಿಕೊಳ್ಳದೆ ಕ್ರೀಡೆಗಳಲ್ಲಿ ಆಸಕ್ತಿ ತೋರಿಸಬೇಕು ಎಂದು ಡಿವೈಎಸ್ಪಿ ಸ್ನೇಹರಾಜ್ ಸಲಹೆ ನೀಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್, ಜೆಎಸ್ಎಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಜೆಎಸ್ಎಸ್ ಸ್ಕೂಲ್ ಆಫ್ ನರ್ಸಿಂಗ್ನ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಎಂದರು.</p>.<p>ನರ್ಸಿಂಗ್ ವೃತ್ತಿ ಶ್ರೇಷ್ಠವಾಗಿದ್ದು ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಬರುವ ರೋಗಿಗಳ ಜೊತೆಗೆ ಶುಶ್ರೂಷಕರು ಆತ್ಮೀಯವಾಗಿ ನಡೆದುಕೊಳ್ಳಬೇಕು. ರೋಗಿಗಳಿಗೆ ಜೀವನೋತ್ಸಾಹ ತುಂಬಿ ನಗುಮೊಗದ ಸೇವೆ ನೀಡಬೇಕು, ಇದರಿಂದ ರೋಗ ಅರ್ಧದಷ್ಟು ಗುಣಮುಖವಾಗುತ್ತದೆ ಎಂದರು.</p>.<p>ಕೊಕ್ಕೊ ಆಟಗಾರ್ತಿ ಎಲ್.ಮೋನಿಕಾ ಮಾತನಾಡಿ, ಅಂತರ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಶಸ್ತಿ ಪಡೆದಿರುವುದಕ್ಕೆ ಹೆಮ್ಮೆ ಇದೆ. ಸಾಧನೆಗೆ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ್ ಅವರ ಮಾರ್ಗದರ್ಶನ ಕಾರಣ. ರಾಜ್ಯ ಸರ್ಕಾರ ಕ್ರೀಡೆಗಳಿಗೆ ಕ್ರೀಡಾಪಟುಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಿದರೆ ಹೆಚ್ಚಿನ ಸಾಧನೆ ಮಾಡಲು ಸ್ಫೂರ್ತಿ ದೊರೆತಂತಾಗುತ್ತದೆ ಎಂದರು.</p>.<p>ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲ ವಿನಯ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಜೆಎಸ್ಎಸ್ ಶಿಕ್ಷಣ ಸಂಸ್ಥೆ ಶಿಕ್ಷಣದ ಜೊತೆಗೆ ಸಂಸ್ಕೃತಿ, ಕ್ರೀಡೆಗಳಿಗೆ ಒತ್ತು ನೀಡುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಕ್ರೀಡಾಪಟು ಮೇಘನಾ ಹಾಗೂ ಮೋನಿಕಾ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ವಿದ್ಯಾರ್ಥಿಗಳು ಮೊಬೈಲ್ ಹವ್ಯಾಸ ಹೆಚ್ಚಾಗಿ ಬೆಳೆಸಿಕೊಳ್ಳದೆ ಕ್ರೀಡೆಗಳಲ್ಲಿ ಆಸಕ್ತಿ ತೋರಿಸಬೇಕು ಎಂದು ಡಿವೈಎಸ್ಪಿ ಸ್ನೇಹರಾಜ್ ಸಲಹೆ ನೀಡಿದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್, ಜೆಎಸ್ಎಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಜೆಎಸ್ಎಸ್ ಸ್ಕೂಲ್ ಆಫ್ ನರ್ಸಿಂಗ್ನ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಎಂದರು.</p>.<p>ನರ್ಸಿಂಗ್ ವೃತ್ತಿ ಶ್ರೇಷ್ಠವಾಗಿದ್ದು ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಿಗೆ ಬರುವ ರೋಗಿಗಳ ಜೊತೆಗೆ ಶುಶ್ರೂಷಕರು ಆತ್ಮೀಯವಾಗಿ ನಡೆದುಕೊಳ್ಳಬೇಕು. ರೋಗಿಗಳಿಗೆ ಜೀವನೋತ್ಸಾಹ ತುಂಬಿ ನಗುಮೊಗದ ಸೇವೆ ನೀಡಬೇಕು, ಇದರಿಂದ ರೋಗ ಅರ್ಧದಷ್ಟು ಗುಣಮುಖವಾಗುತ್ತದೆ ಎಂದರು.</p>.<p>ಕೊಕ್ಕೊ ಆಟಗಾರ್ತಿ ಎಲ್.ಮೋನಿಕಾ ಮಾತನಾಡಿ, ಅಂತರ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಶಸ್ತಿ ಪಡೆದಿರುವುದಕ್ಕೆ ಹೆಮ್ಮೆ ಇದೆ. ಸಾಧನೆಗೆ ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ್ ಅವರ ಮಾರ್ಗದರ್ಶನ ಕಾರಣ. ರಾಜ್ಯ ಸರ್ಕಾರ ಕ್ರೀಡೆಗಳಿಗೆ ಕ್ರೀಡಾಪಟುಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡಿದರೆ ಹೆಚ್ಚಿನ ಸಾಧನೆ ಮಾಡಲು ಸ್ಫೂರ್ತಿ ದೊರೆತಂತಾಗುತ್ತದೆ ಎಂದರು.</p>.<p>ಜೆಎಸ್ಎಸ್ ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲ ವಿನಯ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಜೆಎಸ್ಎಸ್ ಶಿಕ್ಷಣ ಸಂಸ್ಥೆ ಶಿಕ್ಷಣದ ಜೊತೆಗೆ ಸಂಸ್ಕೃತಿ, ಕ್ರೀಡೆಗಳಿಗೆ ಒತ್ತು ನೀಡುತ್ತಿದೆ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಕ್ರೀಡಾಪಟು ಮೇಘನಾ ಹಾಗೂ ಮೋನಿಕಾ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>