<p><strong>ಹನೂರು: </strong>ತಾಲ್ಲೂಕಿನ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿಯ ದರ್ಶನಕ್ಕೆಂದು ಬರುತ್ತಿದ್ದ ಭಕ್ತರ ಕಾರು ತಾಳಬೆಟ್ಟ ಸಮೀಪ ಅಪಘಾತಕ್ಕೀಡಾಗಿ ಹೊತ್ತಿ ಉರಿದು ಆರು ಮಂದಿ ಗಾಯಗೊಂಡಿದ್ದಾರೆ.</p>.<p>ಭಾನುವಾರ ತಡ ರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.</p>.<p>ಘಟನೆಯಲ್ಲಿ ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದ ಬಸವರಾಜು (23) , ಗಣೇಶ್ ( 23) ನವೀನ್ (23) ಪ್ರತಾಪ್ (25) ಡಿ.ಶ್ರೀನಿವಾಸ್ (25) ಅಜಯ್ (22) ಎಂಬುವವರಿಗೆ ಗಾಯಗಳಾಗಿವೆ. ಬಸವರಾಜು ಮತ್ತು ಗಣೇಶ್ ಅವರಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆದಾಖಲು ಮಾಡಲಾಗಿದೆ.</p>.<p>ಆರು ಮಂದಿ ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ತೆರಳುತ್ತಿದ್ದರು. ಭಾನುವಾರ ರಾತ್ರಿ 1.30ರ ವೇಳೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿತ್ತು. ನಂತರ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು: </strong>ತಾಲ್ಲೂಕಿನ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿಯ ದರ್ಶನಕ್ಕೆಂದು ಬರುತ್ತಿದ್ದ ಭಕ್ತರ ಕಾರು ತಾಳಬೆಟ್ಟ ಸಮೀಪ ಅಪಘಾತಕ್ಕೀಡಾಗಿ ಹೊತ್ತಿ ಉರಿದು ಆರು ಮಂದಿ ಗಾಯಗೊಂಡಿದ್ದಾರೆ.</p>.<p>ಭಾನುವಾರ ತಡ ರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.</p>.<p>ಘಟನೆಯಲ್ಲಿ ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದ ಬಸವರಾಜು (23) , ಗಣೇಶ್ ( 23) ನವೀನ್ (23) ಪ್ರತಾಪ್ (25) ಡಿ.ಶ್ರೀನಿವಾಸ್ (25) ಅಜಯ್ (22) ಎಂಬುವವರಿಗೆ ಗಾಯಗಳಾಗಿವೆ. ಬಸವರಾಜು ಮತ್ತು ಗಣೇಶ್ ಅವರಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆದಾಖಲು ಮಾಡಲಾಗಿದೆ.</p>.<p>ಆರು ಮಂದಿ ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ತೆರಳುತ್ತಿದ್ದರು. ಭಾನುವಾರ ರಾತ್ರಿ 1.30ರ ವೇಳೆಯಲ್ಲಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಉರುಳಿ ಬಿತ್ತು. ನಂತರ ಕಾರಿನ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಮಹದೇಶ್ವರ ಬೆಟ್ಟ ಠಾಣೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>