ಚಾಮರಾಜನಗರ: ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯ ಸೋಮವಾರ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಹತ್ತಿರದ ಹಾಗೂ ದೂರದ ಊರುಗಳಿಂದ ಸ್ವಂತ ಹಾಗೂ ಬಾಡಿಗೆ ವಾಹನಗಳಲ್ಲಿ ಬರುತ್ತಿದ್ದಾರೆ.
ಸುರಕ್ಷಿತ ಅಂತರ ಕಾಯ್ದುಕೊಂಡು ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿಶೇಷ ದಾಸೋಹಕ್ಕೂ ವ್ಯವಸ್ಥೆ ಮಾಡಲಾಗಿದೆ.