<p><strong>ಚಾಮರಾಜನಗರ</strong>: ಹಾಸ್ಟೆಲ್ಗಳಲ್ಲಿ ಅವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಆಹಾರ ಪದಾರ್ಥಗಳ ದುರ್ಬಳಕೆ, ಬಿಲ್ ಹಾಗೂ ಕಡತಗಳ ನಿರ್ವಹಣೆ ಮಾಡದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ನ್ಯಾಯಬೆಲೆ ಅಂಗಡಿ ವಿತರಕನ ಪರವಾನಗಿ ಅಮಾನತುಗೊಳಿಸಲಾಗಿದೆ.</p>.<p>ಬಂಡಿಗೆರೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾರ್ಡನ್ಗಳನ್ನು ಒಂದು ತಿಂಗಳು ಕಡ್ಡಾಯ ರಜೆ ಮೇಲೆ ಕಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. </p>.<p>ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಸರ್ಕಾರಿ ಹಾಸ್ಟೆಲ್ಗಳು, ಶಾಲೆಗಳು, ಅಂಗನವಾಡಿ, ಆಹಾರ ದಾಸ್ತಾನು ಗೋದಾಮುಗಳು, ಸರ್ಕಾರಿ ಆಸ್ಪತ್ರೆಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಹಾಸ್ಟೆಲ್ಗಳಲ್ಲಿ ಅವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಆಹಾರ ಪದಾರ್ಥಗಳ ದುರ್ಬಳಕೆ, ಬಿಲ್ ಹಾಗೂ ಕಡತಗಳ ನಿರ್ವಹಣೆ ಮಾಡದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ನ್ಯಾಯಬೆಲೆ ಅಂಗಡಿ ವಿತರಕನ ಪರವಾನಗಿ ಅಮಾನತುಗೊಳಿಸಲಾಗಿದೆ.</p>.<p>ಬಂಡಿಗೆರೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾರ್ಡನ್ಗಳನ್ನು ಒಂದು ತಿಂಗಳು ಕಡ್ಡಾಯ ರಜೆ ಮೇಲೆ ಕಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. </p>.<p>ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಸರ್ಕಾರಿ ಹಾಸ್ಟೆಲ್ಗಳು, ಶಾಲೆಗಳು, ಅಂಗನವಾಡಿ, ಆಹಾರ ದಾಸ್ತಾನು ಗೋದಾಮುಗಳು, ಸರ್ಕಾರಿ ಆಸ್ಪತ್ರೆಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>