<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಕೋವಿಡ್-19 ತಡೆಗೆ ಕೈಗೊಂಡಿರುವಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶ ಡಿ.ವಿ.ಪಾಟೀಲ ಅವರು ಶುಕ್ರವಾರ ನಗರದ ವಿವಿಧ ಸ್ಥಳಗಳೀಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಚಿಕಿತ್ಸಾ ಕ್ರಮಗಳು, ವ್ಯವಸ್ಥೆಗೊಳಿಸಲಾಗಿರುವ ವಾರ್ಡ್ಗಳ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳ ಹಾಗೂ ಹೆರಿಗೆ ವಾರ್ಡ್ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.</p>.<p>ರೋಗಿಗಳೊಂದಿಗೆ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯಗಳು ಸರಿಯಾಗಿ ತಲುಪುತ್ತಿವೆಯೇ? ವೈದ್ಯರ ಸೇವೆ ಸಮರ್ಪಕವಾಗಿ ಸಿಗುತ್ತಿದೆಯೇ’ ಎಂದು ಪ್ರಶ್ನಿಸಿದರು.</p>.<p>ಹಣ್ಣು ಮಾರಾಟ ಮಳಿಗೆ, ಬೇಕರಿಗಳಿಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಗ್ರಾಹಕರಿಗೆ ಸೂಚಿಸಬೇಕು ಎಂದು ಸಲಹೆ ನೀಡಿದರು.</p>.<p>ಭ್ರಮರಾಂಭ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ‘ಸಾಮಾಜಿಕ ಅಂತರ ಕುರಿತ ಮಹತ್ವವನ್ನು ತಿಳಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚಿಸಿದರು. ತೂಕ, ಅಳತೆಯಲ್ಲಿ ವ್ಯತ್ಯಾಸವಾಗಬಾರದು. ಪಡಿತರ ನೀಡಲು ಯಾವುದೇ ಹಣ ಪಡೆಯಬಾರದು’ ಎಂದು ನಿರ್ದೇಶನ ನೀಡಿದರು.</p>.<p>ನಗರದ ಸಿಡಿಎಸ್ ಭವನದಲ್ಲಿರುವ ನಿರ್ಗತಿಕರ ಕೇಂದ್ರಕ್ಕೆ ಭೇಟಿ ಕೊಟ್ಟು ಅಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಿ.ವಿ.ಪಾಟೀಲ ಅವರು, ‘ಹೈಕೋರ್ಟ್ ನಿರ್ದೇಶನದ ಮೇರೆಗೆ ಕೋವಿಡ್ ಸಂಬಂಧ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುತ್ತಿರುವ ಅಗತ್ಯ ವಸ್ತುಗಳ ಸೇವೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆಸ್ಪತ್ರೆಯಲ್ಲಿ ಯಾವುದೇ ತೊಂದರೆ ಇಲ್ಲವೆಂದು ಅಲ್ಲಿ ದಾಖಲಾಗಿರುವವರು ತಿಳಿಸಿದ್ದಾರೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪ್ರಕರಣ ವರದಿಯಾಗಿಲ್ಲ. ಸರ್ಕಾರ ನೀಡಿರುವ ಸೂಚನೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಮನೆಯಿಂದ ಹೊರಗೆ ಬರಬಾರದು. ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಪ್ರತಿ ನಾಗರಿಕರು ಸಹಕರಿಸುವ ಮೂಲಕ ವೈರಾಣು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಕಾರ್ಯದರ್ಶಿ ಮುಂಜು ಹರವೆ, ಸಾಧನಾ ಸಂಸ್ಥೆಯ ಟಿ.ಜೆ. ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಜಿಲ್ಲೆಯಲ್ಲಿ ಕೋವಿಡ್-19 ತಡೆಗೆ ಕೈಗೊಂಡಿರುವಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶ ಡಿ.ವಿ.ಪಾಟೀಲ ಅವರು ಶುಕ್ರವಾರ ನಗರದ ವಿವಿಧ ಸ್ಥಳಗಳೀಗೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಚಿಕಿತ್ಸಾ ಕ್ರಮಗಳು, ವ್ಯವಸ್ಥೆಗೊಳಿಸಲಾಗಿರುವ ವಾರ್ಡ್ಗಳ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳ ಹಾಗೂ ಹೆರಿಗೆ ವಾರ್ಡ್ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.</p>.<p>ರೋಗಿಗಳೊಂದಿಗೆ ಮಾತನಾಡಿದ ಅವರು, ‘ಆಸ್ಪತ್ರೆಯಲ್ಲಿ ಚಿಕಿತ್ಸಾ ಸೌಲಭ್ಯಗಳು ಸರಿಯಾಗಿ ತಲುಪುತ್ತಿವೆಯೇ? ವೈದ್ಯರ ಸೇವೆ ಸಮರ್ಪಕವಾಗಿ ಸಿಗುತ್ತಿದೆಯೇ’ ಎಂದು ಪ್ರಶ್ನಿಸಿದರು.</p>.<p>ಹಣ್ಣು ಮಾರಾಟ ಮಳಿಗೆ, ಬೇಕರಿಗಳಿಗೆ ಭೇಟಿ ನೀಡಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಗ್ರಾಹಕರಿಗೆ ಸೂಚಿಸಬೇಕು ಎಂದು ಸಲಹೆ ನೀಡಿದರು.</p>.<p>ಭ್ರಮರಾಂಭ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ‘ಸಾಮಾಜಿಕ ಅಂತರ ಕುರಿತ ಮಹತ್ವವನ್ನು ತಿಳಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚಿಸಿದರು. ತೂಕ, ಅಳತೆಯಲ್ಲಿ ವ್ಯತ್ಯಾಸವಾಗಬಾರದು. ಪಡಿತರ ನೀಡಲು ಯಾವುದೇ ಹಣ ಪಡೆಯಬಾರದು’ ಎಂದು ನಿರ್ದೇಶನ ನೀಡಿದರು.</p>.<p>ನಗರದ ಸಿಡಿಎಸ್ ಭವನದಲ್ಲಿರುವ ನಿರ್ಗತಿಕರ ಕೇಂದ್ರಕ್ಕೆ ಭೇಟಿ ಕೊಟ್ಟು ಅಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಡಿ.ವಿ.ಪಾಟೀಲ ಅವರು, ‘ಹೈಕೋರ್ಟ್ ನಿರ್ದೇಶನದ ಮೇರೆಗೆ ಕೋವಿಡ್ ಸಂಬಂಧ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಾಗುತ್ತಿರುವ ಅಗತ್ಯ ವಸ್ತುಗಳ ಸೇವೆ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಆಸ್ಪತ್ರೆಯಲ್ಲಿ ಯಾವುದೇ ತೊಂದರೆ ಇಲ್ಲವೆಂದು ಅಲ್ಲಿ ದಾಖಲಾಗಿರುವವರು ತಿಳಿಸಿದ್ದಾರೆ’ ಎಂದರು.</p>.<p>‘ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪ್ರಕರಣ ವರದಿಯಾಗಿಲ್ಲ. ಸರ್ಕಾರ ನೀಡಿರುವ ಸೂಚನೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಮನೆಯಿಂದ ಹೊರಗೆ ಬರಬಾರದು. ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಪ್ರತಿ ನಾಗರಿಕರು ಸಹಕರಿಸುವ ಮೂಲಕ ವೈರಾಣು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್, ಕಾರ್ಯದರ್ಶಿ ಮುಂಜು ಹರವೆ, ಸಾಧನಾ ಸಂಸ್ಥೆಯ ಟಿ.ಜೆ. ಸುರೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>