<p><strong>ಚಾಮರಾಜನಗರ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ (ನ.21) ಚುನಾವಣೆ ನಡೆಯಲಿದೆ.</p>.<p>ಸಿ.ಎಂ.ನರಸಿಂಹಮೂರ್ತಿ, ಶೈಲಕುಮಾರ್, ನಾಗೇಶ್ ಸೋಸ್ಲೆ ಹಾಗೂ ಸ್ನೇಹ ಅವರು ಕಣದಲ್ಲಿದ್ದಾರೆ. ಸ್ನೇಹ ಅವರು ತಟಸ್ಥರಾಗಿದ್ದು, ನಾಗೇಶ್ ಸೋಸ್ಲೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಜಿಲ್ಲಾ ಕಸಾಪದ ಸದಸ್ಯರ ಪೈಕಿ 4,830 ಮಂದಿಗೆ ಮತದಾನ ಮಾಡುವ ಹಕ್ಕಿದ್ದು, ಚಾಮರಾಜನಗರ ತಾಲ್ಲೂಕಿನಲ್ಲಿ 2,524, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 829, ಯಳಂದೂರಿನಲ್ಲಿ 623, ಕೊಳ್ಳೇಗಾಲದಲ್ಲಿ 545 ಹಾಗೂ ಹನೂರು ತಾಲ್ಲೂಕಿನಲ್ಲಿ 309 ಮತದಾರರಿದ್ದಾರೆ.</p>.<p class="Subhead">ನಿಷೇಧಾಜ್ಞೆ:ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶನಿವಾರ ಮಧ್ಯರಾತ್ರಿ 12 ಗಂಟೆಯಿಂದ ಭಾನುವಾರ ಮಧ್ಯರಾತ್ರಿ 12 ಗಂಟೆಯವರೆಗೆ ಮತದಾನ ಕೇಂದ್ರಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಷರತ್ತುಗಳನ್ನು ವಿಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.</p>.<p>ನಿಷೇಧಾಜ್ಞೆ ಅವಧಿಯಲ್ಲಿ ಮೆರವಣಿಗೆ ಅಥವಾ ಐವರಿಗಿಂತ ಹೆಚ್ಚು ಜನ ಸೇರಬಾರದು. ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಪೋಟಕ ವಸ್ತುಗಳನ್ನು ಒಯ್ಯುವುದು, ಪ್ರತಿಕೃತಿ ಪ್ರದರ್ಶನ, ದಹನ ಹಾಗೂ ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.</p>.<p>ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ, ವ್ಯಕ್ತಿಗಳ ತೇಜೋವಧೆ, ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸಬಾರದು. ಸಾರ್ವಜನಿಕರ ಗಾಂಭೀರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p class="Briefhead"><strong>ಏಳು ಮತಗಟ್ಟೆಗಳ ಸ್ಥಾಪನೆ</strong></p>.<p>ಚುನಾವಣೆಗಾಗಿ ಜಿಲ್ಲೆಯಾದ್ಯಂತ ಏಳು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚಾಮರಾಜನಗರ ತಾಲ್ಲೂಕು ಕಚೇರಿಯಲ್ಲಿ ಮೂರು (ಸಭಾಂಗಣ, ಆಡಳಿತ ಶಾಖೆ, ಚುನಾವಣಾ ಶಾಖೆ) , ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರು ಮತಗಟ್ಟೆಗಳಲ್ಲಿ ತಲಾ ಒಂದು ಹಾಗೂ ಹನೂರು ಬಿಆರ್ಸಿ ಕೇಂದ್ರದಲ್ಲಿ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ (ನ.21) ಚುನಾವಣೆ ನಡೆಯಲಿದೆ.</p>.<p>ಸಿ.ಎಂ.ನರಸಿಂಹಮೂರ್ತಿ, ಶೈಲಕುಮಾರ್, ನಾಗೇಶ್ ಸೋಸ್ಲೆ ಹಾಗೂ ಸ್ನೇಹ ಅವರು ಕಣದಲ್ಲಿದ್ದಾರೆ. ಸ್ನೇಹ ಅವರು ತಟಸ್ಥರಾಗಿದ್ದು, ನಾಗೇಶ್ ಸೋಸ್ಲೆ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಜಿಲ್ಲಾ ಕಸಾಪದ ಸದಸ್ಯರ ಪೈಕಿ 4,830 ಮಂದಿಗೆ ಮತದಾನ ಮಾಡುವ ಹಕ್ಕಿದ್ದು, ಚಾಮರಾಜನಗರ ತಾಲ್ಲೂಕಿನಲ್ಲಿ 2,524, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 829, ಯಳಂದೂರಿನಲ್ಲಿ 623, ಕೊಳ್ಳೇಗಾಲದಲ್ಲಿ 545 ಹಾಗೂ ಹನೂರು ತಾಲ್ಲೂಕಿನಲ್ಲಿ 309 ಮತದಾರರಿದ್ದಾರೆ.</p>.<p class="Subhead">ನಿಷೇಧಾಜ್ಞೆ:ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶನಿವಾರ ಮಧ್ಯರಾತ್ರಿ 12 ಗಂಟೆಯಿಂದ ಭಾನುವಾರ ಮಧ್ಯರಾತ್ರಿ 12 ಗಂಟೆಯವರೆಗೆ ಮತದಾನ ಕೇಂದ್ರಗಳ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಷರತ್ತುಗಳನ್ನು ವಿಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.</p>.<p>ನಿಷೇಧಾಜ್ಞೆ ಅವಧಿಯಲ್ಲಿ ಮೆರವಣಿಗೆ ಅಥವಾ ಐವರಿಗಿಂತ ಹೆಚ್ಚು ಜನ ಸೇರಬಾರದು. ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಪೋಟಕ ವಸ್ತುಗಳನ್ನು ಒಯ್ಯುವುದು, ಪ್ರತಿಕೃತಿ ಪ್ರದರ್ಶನ, ದಹನ ಹಾಗೂ ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.</p>.<p>ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ, ವ್ಯಕ್ತಿಗಳ ತೇಜೋವಧೆ, ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸಬಾರದು. ಸಾರ್ವಜನಿಕರ ಗಾಂಭೀರ್ಯ ಮತ್ತು ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗಬಾರದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.</p>.<p class="Briefhead"><strong>ಏಳು ಮತಗಟ್ಟೆಗಳ ಸ್ಥಾಪನೆ</strong></p>.<p>ಚುನಾವಣೆಗಾಗಿ ಜಿಲ್ಲೆಯಾದ್ಯಂತ ಏಳು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚಾಮರಾಜನಗರ ತಾಲ್ಲೂಕು ಕಚೇರಿಯಲ್ಲಿ ಮೂರು (ಸಭಾಂಗಣ, ಆಡಳಿತ ಶಾಖೆ, ಚುನಾವಣಾ ಶಾಖೆ) , ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರು ಮತಗಟ್ಟೆಗಳಲ್ಲಿ ತಲಾ ಒಂದು ಹಾಗೂ ಹನೂರು ಬಿಆರ್ಸಿ ಕೇಂದ್ರದಲ್ಲಿ ಒಂದು ಮತಗಟ್ಟೆ ಸ್ಥಾಪಿಸಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>