ಚಾಮರಾಜನಗರ: ಜಿಲ್ಲಾಧಿಕರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಭಾಗವಾಗಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಾಲ್ಲೂಕಿನ ಸಂತೇಮರಹಳ್ಳಿ ಹೋಬಳಿಯ ಬಾಗಳಿ ಗ್ರಾಮದಲ್ಲಿ ಶನಿವಾರ ವಾಸ್ತವ್ಯ ಹೂಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಗ್ರಾಮಕ್ಕೆ ಬಂದ ಜಿಲ್ಲಾಧಿಕಾರಿ ಅವರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡರು. ಅಲಂಕೃತ ಎತ್ತಿನ ಗಾಡಿಯಲ್ಲಿ ಜಿಲ್ಲಾಧಿಕಾರಿ ಅವರನ್ನು ಮೆರವಣಿಗೆ ಮಾಡಿ ವಾಸ್ತವ್ಯ ಹೂಡಲಿರುವ ಸ್ಥಳಕ್ಕೆ (ಸರ್ಕಾರಿ ಪ್ರೌಢ ಶಾಲೆ ಆವರಣ) ಕರೆದುಕೊಂಡು ಬಂದರು.
12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಿದ್ದು, ಜನರ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿ ಅವರು ಆಲಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.