ಶೀಘ್ರ ನೇಮಕ: ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್ ಅವರು, ‘ವೈದ್ಯರ ಕೊರತೆ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ನೀಡುತ್ತಿರುವುದರಿಂದ ವೈದ್ಯರು ಕೂಡ ಒಂದು ಕಡೆಯಿಂದ ಮತ್ತೊಂದೆಡೆಗೆ ಹೋಗುತ್ತಿಲ್ಲ. ಹಂಗಳಕ್ಕೆ ಕಾಯಂ ವೈದ್ಯರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.