<p><strong>ಗುಂಡ್ಲುಪೇಟೆ</strong>: ಸೂಕ್ತ ದಾಖಲೆಗಳು ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹ 37 ಲಕ್ಷ ನಗದನ್ನು ತಾಲ್ಲೂಕಿನ ಗಡಿ ಭಾಗದ ಮದ್ದೂರು ಚೆಕ್ ಪೋಸ್ಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p><p>ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಗುಂಡ್ಲುಪೇಟೆ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆಗೊಳಪಡಿಸಿದಾಗ ಕಾರಿನಲ್ಲಿದ್ದ ಲೆದರ್ಬ್ಯಾಗ್ನಲ್ಲಿ ₹ 20 ಲಕ್ಷ ಪತ್ತೆಯಾಗಿದೆ. ಬಳಿಕ ಅನುಮಾನಗೊಂಡ ಪೊಲೀಸರು ಕಾರನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಹಿಂಬದಿ ಸೀಟಿನಲ್ಲಿಟ್ಟಿದ್ದ ಬ್ಯಾಗಿನಲ್ಲೂ ₹ 17 ಲಕ್ಷ ದೊರೆತಿದೆ.</p><p>ಕೇರಳ ಮೂಲದ ಹೊಟೇಲ್ ಉದ್ಯಮಿಗಳಾದ ಪಿ.ಆರ್.ರಾಹುಲ್ ಹಾಗೂ ಸಿ.ಕೆ.ತಾಲ್ವಿನ್ ಅವರ ಕಾರಿನಲ್ಲಿ ಹಣ ದೊರೆತಿದ್ದು ಯಾವುದೇ ದಾಖಲೆಗಳನ್ನು ಹಾಜರುಪಡಿಸದ ಪರಿಣಾಮ ನಗದು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಪಾಸಣೆ ವೇಳೆ ಪಿಎಸ್ಐ ಸಾಹೇಬಗೌಡ, ಸಿಬ್ಬಂದಿಗಳಾದ ಬಂಟಪ್ಪ, ಪ್ರಭು ಬೊಮ್ಮನಹಳ್ಳಿ ಸತೀಶ್ ಪಾರಿಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ಸೂಕ್ತ ದಾಖಲೆಗಳು ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹ 37 ಲಕ್ಷ ನಗದನ್ನು ತಾಲ್ಲೂಕಿನ ಗಡಿ ಭಾಗದ ಮದ್ದೂರು ಚೆಕ್ ಪೋಸ್ಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.</p><p>ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಚೆಕ್ಪೋಸ್ಟ್ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಗುಂಡ್ಲುಪೇಟೆ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆಗೊಳಪಡಿಸಿದಾಗ ಕಾರಿನಲ್ಲಿದ್ದ ಲೆದರ್ಬ್ಯಾಗ್ನಲ್ಲಿ ₹ 20 ಲಕ್ಷ ಪತ್ತೆಯಾಗಿದೆ. ಬಳಿಕ ಅನುಮಾನಗೊಂಡ ಪೊಲೀಸರು ಕಾರನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಹಿಂಬದಿ ಸೀಟಿನಲ್ಲಿಟ್ಟಿದ್ದ ಬ್ಯಾಗಿನಲ್ಲೂ ₹ 17 ಲಕ್ಷ ದೊರೆತಿದೆ.</p><p>ಕೇರಳ ಮೂಲದ ಹೊಟೇಲ್ ಉದ್ಯಮಿಗಳಾದ ಪಿ.ಆರ್.ರಾಹುಲ್ ಹಾಗೂ ಸಿ.ಕೆ.ತಾಲ್ವಿನ್ ಅವರ ಕಾರಿನಲ್ಲಿ ಹಣ ದೊರೆತಿದ್ದು ಯಾವುದೇ ದಾಖಲೆಗಳನ್ನು ಹಾಜರುಪಡಿಸದ ಪರಿಣಾಮ ನಗದು ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಪಾಸಣೆ ವೇಳೆ ಪಿಎಸ್ಐ ಸಾಹೇಬಗೌಡ, ಸಿಬ್ಬಂದಿಗಳಾದ ಬಂಟಪ್ಪ, ಪ್ರಭು ಬೊಮ್ಮನಹಳ್ಳಿ ಸತೀಶ್ ಪಾರಿಗೊಂಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>