ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಮಲೆಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕುಂಡಲು, ‘ಬುಧವಾರ ಮಹದೇಶ್ವರ ಬೆಟ್ಟದಲ್ಲಿ ವಿದ್ಯುತ್ ಇಲ್ಲದಿದ್ದರಿಂದ ಜನ-ವನ ಸೇತುವೆ ಸಾರಿಗೆ ಚಾಲಕನ ದೂರವಾಣಿ ಸ್ವಿಚ್ ಆಫ್ ಆಗಿತ್ತು. ವಿದ್ಯುತ್ ಬಂದ ಬಳಿಕ ವಾಪಸ್ ಕರೆ ಮಾಡಿದಾಗ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಸಂಪರ್ಕದ ಕೊರತೆಯಿಂದಾಗಿ ಈ ಸಮಸ್ಯೆ ಉಂಟಾಗಿದೆ. ಕೆಲವು ದಿನಗಳ ಹಿಂದೆ ನಮ್ಮ ಸಾರಿಗೆಯಲ್ಲಿ ಗರ್ಭಿಣಿಯೊಬ್ಬರನ್ನು ಕರೆ ತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮುಂದೆ ಇಂಥ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸಲಾಗುವುದು’ ಎಂದರು.