<p><strong>ಚಾಮರಾಜನಗರ</strong>: ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಡಾ.ಮಾಲತಿ ಪ್ರಿಯಾ ಗುರುವಾರ ಅಧಿಕಾರ ಸ್ವೀಕರಿಸಿದರು. ಟಿ.ಹೀರಾಲಾಲ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಲತಿ ಪ್ರಿಯಾ ಅವರನ್ನು ನಿಯೋಜಿಸಲಾಗಿದೆ.</p>.<p>ಹಿಂದೆ ಮೈಸೂರು ಸಿಎಫ್ (ವರ್ಕಿಂಗ್ ಪ್ಲಾನ್) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಲತಿ ಪ್ರಿಯಾ ಅವರಿಗೆ ಸಿಸಿಎಫ್ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಕ್ಕೂ ಮುನ್ನ ಚಾಮರಾಜನಗರ ವೃತ್ತದ ಪ್ರಭಾರ ಸಿಸಿಎಫ್ ಆಗಿ, ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಆಗಿಯೂ ಅವರು ಕರ್ತವ್ಯ ನಿಭಾಯಿಸಿದ್ದಾರೆ.</p>.<p>ಪ್ರಕಾಶ್ಕರ್ ವರ್ಗಾವಣೆ:</p>.<p>ಬಿಆರ್ಟಿ ಹುಲಿ ಸಂರಕ್ಷಿತ ವಲಯ ವ್ಯಾಪ್ತಿಯ ಯಳಂದೂರು ವನ್ಯಜೀವಿ ವಿಭಾಗದ ಎಸಿಎಫ್ ಆಗಿದ್ದ ಪ್ರಕಾಶಕ್ರ್ ಅಕ್ಷಯ್ ಅಶೋಕ್ ಅವರಿಗೆ ಪದೋನ್ನತಿ ನೀಡಿ ಹಾವೇರಿ ವಿಭಾಗದ ಡಿಸಿಎಫ್ ಆಗಿ ವರ್ಗಾವಣೆ ಮಾಡಲಾಗಿದೆ.</p>.<p>ಎಂಎಂ ಹಿಲ್ಸ್ ವನ್ಯಧಾಮ ಉಪ ವಲಯದ ಎಸಿಎಫ್ ಸ್ವಪ್ನಿಲ್ ಮನೋಹರ್ ಅಹಿರೆ ಅವರಿಗೆ ಹಿರಿಯ ಎಸಿಎಫ್ ಹುದ್ದೆಗೆ ಪದೋನ್ನತಿ ನೀಡಲಾಗಿದ್ದು ಹಾಲಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ.</p>.<p>ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹಾಗೂ ಡಿಸಿಎಫ್ ಬಿ.ಎಸ್.ಶ್ರೀಪತಿ ಅವರಿಗೆ ಕಿರಿಯ ಆಡಳಿತ ಗ್ರೇಡ್–12ಕ್ಕೆ ಪದೋನ್ನತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಡಾ.ಮಾಲತಿ ಪ್ರಿಯಾ ಗುರುವಾರ ಅಧಿಕಾರ ಸ್ವೀಕರಿಸಿದರು. ಟಿ.ಹೀರಾಲಾಲ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಲತಿ ಪ್ರಿಯಾ ಅವರನ್ನು ನಿಯೋಜಿಸಲಾಗಿದೆ.</p>.<p>ಹಿಂದೆ ಮೈಸೂರು ಸಿಎಫ್ (ವರ್ಕಿಂಗ್ ಪ್ಲಾನ್) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಾಲತಿ ಪ್ರಿಯಾ ಅವರಿಗೆ ಸಿಸಿಎಫ್ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಇದಕ್ಕೂ ಮುನ್ನ ಚಾಮರಾಜನಗರ ವೃತ್ತದ ಪ್ರಭಾರ ಸಿಸಿಎಫ್ ಆಗಿ, ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಆಗಿಯೂ ಅವರು ಕರ್ತವ್ಯ ನಿಭಾಯಿಸಿದ್ದಾರೆ.</p>.<p>ಪ್ರಕಾಶ್ಕರ್ ವರ್ಗಾವಣೆ:</p>.<p>ಬಿಆರ್ಟಿ ಹುಲಿ ಸಂರಕ್ಷಿತ ವಲಯ ವ್ಯಾಪ್ತಿಯ ಯಳಂದೂರು ವನ್ಯಜೀವಿ ವಿಭಾಗದ ಎಸಿಎಫ್ ಆಗಿದ್ದ ಪ್ರಕಾಶಕ್ರ್ ಅಕ್ಷಯ್ ಅಶೋಕ್ ಅವರಿಗೆ ಪದೋನ್ನತಿ ನೀಡಿ ಹಾವೇರಿ ವಿಭಾಗದ ಡಿಸಿಎಫ್ ಆಗಿ ವರ್ಗಾವಣೆ ಮಾಡಲಾಗಿದೆ.</p>.<p>ಎಂಎಂ ಹಿಲ್ಸ್ ವನ್ಯಧಾಮ ಉಪ ವಲಯದ ಎಸಿಎಫ್ ಸ್ವಪ್ನಿಲ್ ಮನೋಹರ್ ಅಹಿರೆ ಅವರಿಗೆ ಹಿರಿಯ ಎಸಿಎಫ್ ಹುದ್ದೆಗೆ ಪದೋನ್ನತಿ ನೀಡಲಾಗಿದ್ದು ಹಾಲಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ.</p>.<p>ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹಾಗೂ ಡಿಸಿಎಫ್ ಬಿ.ಎಸ್.ಶ್ರೀಪತಿ ಅವರಿಗೆ ಕಿರಿಯ ಆಡಳಿತ ಗ್ರೇಡ್–12ಕ್ಕೆ ಪದೋನ್ನತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>