<p><strong>ಚಾಮರಾಜನಗರ</strong>: ಕಳೆದ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆನಷ್ಟ ಅನುಭವಿಸಿದ ಜಿಲ್ಲೆಯ ರೈತರ ಖಾತೆಗೆ ತಲಾ ₹2000 ಹಣವನ್ನು ರಾಜ್ಯ ಸರ್ಕಾರ ಜಮೆ ಮಾಡಿದೆ. </p>.<p>ಜಿಲ್ಲೆಯ 47,552 ಫಲಾನುಭವಿಗಳ ಖಾತೆಗೆ ₹8.90 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. </p>.<p>ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಕಾಡಿದ್ದರಿಂದ ಜಿಲ್ಲೆಯ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದರು. ಸರ್ಕಾರ ಕೂಡ ಜಿಲ್ಲೆಯ ಐದೂ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. </p>.<p>ಮೊದಲ ಹಂತದಲ್ಲಿ ನಷ್ಟ ಅನುಭವಿಸಿದ ರೈತರಿಗೆ ₹2,000 ಪಾವತಿ ಮಾಡುವುದಾಗಿ ಸರ್ಕಾರ ಹೇಳಿತ್ತು. ಇದಕ್ಕಾಗಿ ₹105 ಕೋಟಿ ಬಿಡುಗಡೆ ಮಾಡಿತ್ತು. </p>.<p>ಫ್ರೂಟ್ಸ್ ತಂತ್ರಾಂಶದಿಂದ ಪಡೆದ ಬೆಳೆ ನಷ್ಟ ಮಾಹಿತಿ ಆಧಾರದಲ್ಲಿ ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದ ಮೂಲಕ ಬರ ಪರಿಹಾರ ನೀಡಲಾಗಿದೆ. </p>.<p>ಜಿಲ್ಲೆಯಲ್ಲಿ ಏಳು ಬ್ಯಾಚ್ಗಳಲ್ಲಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಆರು ಬ್ಯಾಚ್ನವರಿಗೆ ಹಣ ಪಾವತಿಯಾಗಿದ್ದು, ಏಳನೇ ಬ್ಯಾಚ್ನ ರೈತರ ಖಾತೆಗಳಿಗೆ ಒಂದೆರಡು ದಿನಗಳಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.<p>ಐದು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮಳೆಯಾಶ್ರಿತ 39,263 ಹೆಕ್ಟೇರ್ಗಳಲ್ಲಿ ಮತ್ತು ನೀರಾವರಿ ಆಶ್ರಿತ 3,542 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. </p>.<p>ಗುಂಡ್ಲುಪೇಟೆಯಲ್ಲಿ ಹೆಚ್ಚು: ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ, 20,089 ಹೆಕ್ಟೇರ್ ಬೆಳೆ ನಷ್ಟವಾಗಿದ್ದು, 20,581 ಫಲಾನುಭವಿಗಳಿಗೆ ₹2000ದಂತೆ ₹3.89 ಕೋಟಿ ಪಾವತಿಯಾಗಿದೆ. </p>.<p>ಚಾಮರಾಜನಗರ ತಾಲ್ಲೂಕಿನಲ್ಲಿ 13,103 ಹೆಕ್ಟೇರ್ನಲ್ಲಿ ಬೆಳೆನಷ್ಟವಾಗಿದ್ದು, 14,441 ಮಂದಿಗೆ ₹2.57 ಕೋಟಿ ಪರಿಹಾರ ದೊರೆತಿದೆ.</p>.<p>ಹನೂರು ತಾಲ್ಲೂಕಿನಲ್ಲಿ 5,188 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವಲ್ಲದೆ, 3,542 ಹೆಕ್ಟೇರ್ ನೀರಾವರಿ ಜಮೀನಿನಲ್ಲೂ ಬೆಳೆದಿದ್ದ ಬೆಳೆ ಹಾಳಾಗಿತ್ತು. ತಾಲ್ಲೂಕಿನ 11,105 ಫಲಾನುಭವಿಗಳಿಗೆ ₹2.18 ಕೋಟಿ ಜಮೆಯಾಗಿದೆ. </p>.<p>ಬರಪರಿಹಾರ ಪಡೆದವರ ಮಾಹಿತಿ, ನಾಡಕಚೇರಿಗಳು ಹಾಗೂ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p> ಪರಿಹಾರ ತಂತ್ರಾಂಶದ ಮೂಲಕ ಜಮೆ ಏಳು ಬ್ಯಾಚ್ಗಳಲ್ಲಿ ಹಣ ಪಾವತಿ ಗುಂಡ್ಲುಪೇಟೆಯಲ್ಲಿ ಹೆಚ್ಚು ಮಂದಿ</p>.<p><strong>ರಾಜ್ಯ ಮಟ್ಟದಿಂದಲೇ ನೇರವಾಗಿ ಹಣ ಪಾವತಿಯಾಗಿದ್ದು 47,552 ಮಂದಿಗೆ ₹8.90 ಕೋಟಿ ಜಮೆಯಾಗಿದೆ. ಜಿಲ್ಲಾ ಹಂತದಲ್ಲಿ ಯಾವುದೂ ಬಾಕಿ ಇಲ್ಲ- ಸಿ.ಟಿ.ಶಿಲ್ಪಾನಾಗ್ ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಕಳೆದ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆನಷ್ಟ ಅನುಭವಿಸಿದ ಜಿಲ್ಲೆಯ ರೈತರ ಖಾತೆಗೆ ತಲಾ ₹2000 ಹಣವನ್ನು ರಾಜ್ಯ ಸರ್ಕಾರ ಜಮೆ ಮಾಡಿದೆ. </p>.<p>ಜಿಲ್ಲೆಯ 47,552 ಫಲಾನುಭವಿಗಳ ಖಾತೆಗೆ ₹8.90 ಕೋಟಿ ಹಣ ಜಮೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. </p>.<p>ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಕಾಡಿದ್ದರಿಂದ ಜಿಲ್ಲೆಯ ಸಾವಿರಾರು ರೈತರು ಬೆಳೆ ನಷ್ಟ ಅನುಭವಿಸಿದ್ದರು. ಸರ್ಕಾರ ಕೂಡ ಜಿಲ್ಲೆಯ ಐದೂ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. </p>.<p>ಮೊದಲ ಹಂತದಲ್ಲಿ ನಷ್ಟ ಅನುಭವಿಸಿದ ರೈತರಿಗೆ ₹2,000 ಪಾವತಿ ಮಾಡುವುದಾಗಿ ಸರ್ಕಾರ ಹೇಳಿತ್ತು. ಇದಕ್ಕಾಗಿ ₹105 ಕೋಟಿ ಬಿಡುಗಡೆ ಮಾಡಿತ್ತು. </p>.<p>ಫ್ರೂಟ್ಸ್ ತಂತ್ರಾಂಶದಿಂದ ಪಡೆದ ಬೆಳೆ ನಷ್ಟ ಮಾಹಿತಿ ಆಧಾರದಲ್ಲಿ ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶದ ಮೂಲಕ ಬರ ಪರಿಹಾರ ನೀಡಲಾಗಿದೆ. </p>.<p>ಜಿಲ್ಲೆಯಲ್ಲಿ ಏಳು ಬ್ಯಾಚ್ಗಳಲ್ಲಿ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಆರು ಬ್ಯಾಚ್ನವರಿಗೆ ಹಣ ಪಾವತಿಯಾಗಿದ್ದು, ಏಳನೇ ಬ್ಯಾಚ್ನ ರೈತರ ಖಾತೆಗಳಿಗೆ ಒಂದೆರಡು ದಿನಗಳಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p>.<p>ಐದು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮಳೆಯಾಶ್ರಿತ 39,263 ಹೆಕ್ಟೇರ್ಗಳಲ್ಲಿ ಮತ್ತು ನೀರಾವರಿ ಆಶ್ರಿತ 3,542 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. </p>.<p>ಗುಂಡ್ಲುಪೇಟೆಯಲ್ಲಿ ಹೆಚ್ಚು: ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂದರೆ, 20,089 ಹೆಕ್ಟೇರ್ ಬೆಳೆ ನಷ್ಟವಾಗಿದ್ದು, 20,581 ಫಲಾನುಭವಿಗಳಿಗೆ ₹2000ದಂತೆ ₹3.89 ಕೋಟಿ ಪಾವತಿಯಾಗಿದೆ. </p>.<p>ಚಾಮರಾಜನಗರ ತಾಲ್ಲೂಕಿನಲ್ಲಿ 13,103 ಹೆಕ್ಟೇರ್ನಲ್ಲಿ ಬೆಳೆನಷ್ಟವಾಗಿದ್ದು, 14,441 ಮಂದಿಗೆ ₹2.57 ಕೋಟಿ ಪರಿಹಾರ ದೊರೆತಿದೆ.</p>.<p>ಹನೂರು ತಾಲ್ಲೂಕಿನಲ್ಲಿ 5,188 ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವಲ್ಲದೆ, 3,542 ಹೆಕ್ಟೇರ್ ನೀರಾವರಿ ಜಮೀನಿನಲ್ಲೂ ಬೆಳೆದಿದ್ದ ಬೆಳೆ ಹಾಳಾಗಿತ್ತು. ತಾಲ್ಲೂಕಿನ 11,105 ಫಲಾನುಭವಿಗಳಿಗೆ ₹2.18 ಕೋಟಿ ಜಮೆಯಾಗಿದೆ. </p>.<p>ಬರಪರಿಹಾರ ಪಡೆದವರ ಮಾಹಿತಿ, ನಾಡಕಚೇರಿಗಳು ಹಾಗೂ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p> ಪರಿಹಾರ ತಂತ್ರಾಂಶದ ಮೂಲಕ ಜಮೆ ಏಳು ಬ್ಯಾಚ್ಗಳಲ್ಲಿ ಹಣ ಪಾವತಿ ಗುಂಡ್ಲುಪೇಟೆಯಲ್ಲಿ ಹೆಚ್ಚು ಮಂದಿ</p>.<p><strong>ರಾಜ್ಯ ಮಟ್ಟದಿಂದಲೇ ನೇರವಾಗಿ ಹಣ ಪಾವತಿಯಾಗಿದ್ದು 47,552 ಮಂದಿಗೆ ₹8.90 ಕೋಟಿ ಜಮೆಯಾಗಿದೆ. ಜಿಲ್ಲಾ ಹಂತದಲ್ಲಿ ಯಾವುದೂ ಬಾಕಿ ಇಲ್ಲ- ಸಿ.ಟಿ.ಶಿಲ್ಪಾನಾಗ್ ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>