ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಚಾಮರಾಜನಗರ | ಕುಸಿದ ಅಂತರ್ಜಲ; ಜಲ ಸಂರಕ್ಷಣೆಗೆ ಬೇಕಿದೆ ಒತ್ತು

ಎರಡು ವರ್ಷಗಳಿಗೆ ಹೋಲಿಸಿದರೆ, ಈ ಮಾರ್ಚ್‌ನಲ್ಲಿ ಗರಿಷ್ಠ ಮಟ್ಟಕ್ಕೆ ಕುಸಿದ ನೀರಿನ ಮಟ್ಟ
Published : 8 ಏಪ್ರಿಲ್ 2024, 8:08 IST
Last Updated : 8 ಏಪ್ರಿಲ್ 2024, 8:08 IST
ಫಾಲೋ ಮಾಡಿ
Comments
ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಿಗೌಡನಹಳ್ಳಿ ಕೆರೆ ಸಂಪೂರ್ಣವಾಗಿ ಬರಿದಾಗಿದೆ
ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಿಗೌಡನಹಳ್ಳಿ ಕೆರೆ ಸಂಪೂರ್ಣವಾಗಿ ಬರಿದಾಗಿದೆ
ಹನೂರು ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿರುವ ಕೆರೆಯಲ್ಲಿ ನೀರು ತಳ ಮುಟ್ಟಿದೆ
ಹನೂರು ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿರುವ ಕೆರೆಯಲ್ಲಿ ನೀರು ತಳ ಮುಟ್ಟಿದೆ
‘ಮಳೆ ನೀರು ಸಂಗ್ರಹಕ್ಕೆ ಒತ್ತುಕೊಡಿ’
ಅಂತರ್ಜಲ ಸ್ಥಿತಿಗತಿ ಬಗ್ಗೆ ಪ್ರತಿಕ್ರಿಯಿಸಿದ ಅಂತರ್ಜಲ ನಿರ್ದೇಶನಾಲಯದ ಜಿಲ್ಲಾ ಕಚೇರಿಯ ಹಿರಿಯ ಭೂ ವಿಜ್ಞಾನಿ ಆರ್‌.ಧನಲಕ್ಷ್ಮಿ ‘ಬರ ಪರಿಸ್ಥಿತಿ ಇರುವುದರಿಂದ ಅಂತರ್ಜಲದ ಮಟ್ಟ ಕಡಿಮೆಯಾಗುತ್ತಿದೆ. ಐದು ತಾಲ್ಲೂಕುಗಳಿಗೆ ಹೋಲಿಸಿದರೆ ಗುಂಡ್ಲುಪೇಟೆಯಲ್ಲಿ ಹೆಚ್ಚು ಕುಸಿದಿದೆ. ನಂತರದ ಸ್ಥಾನದಲ್ಲಿ ಚಾಮರಾಜನಗರ ತಾಲ್ಲೂಕು ಇದೆ. ಹನೂರು ಭಾಗದಲ್ಲೂ ಅಂತರ್ಜಲದ ಮಟ್ಟ ಗಣನೀಯವಾಗಿ ಕುಸಿದಿದೆ. 2014–15ರ ಮೊದಲು ಇಂತಹ ಪರಿಸ್ಥಿತಿ ಉದ್ಭವವಾಗಿತ್ತು. ಕೆರೆ ತುಂಬಿಸುವ ಯೋಜನೆ ಅನುಷ್ಠಾನಗೊಂಡ ನಂತರ ಆ ಭಾಗದಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿತ್ತು. ಗುಂಡ್ಲುಪೇಟೆ ತಾಲ್ಲೂಕಿನ ಒಂಬತ್ತು ಚಾಮರಾಜನಗರ ತಾಲ್ಲೂಕಿನ ಎರಡು ಕೆರೆಗಳ ವ್ಯಾಪ್ತಿಯಲ್ಲಿ ನಾವು ಅಧ್ಯಯನ ಕೈಗೊಂಡಿದ್ದೆವು. ಆ ಭಾಗದ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ 1.5–2 ಇಂಚಿನಿಂದ 2.5–3 ಇಂಚುಗಳಷ್ಟು ಏರಿಕೆಯಾಗಿತ್ತು’ ಎಂದು ವಿವರಿಸಿದರು.  ‘ಕೆರೆ ತುಂಬಿಸುವ ಯೋಜನೆ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಹೆಚ್ಚು ಕುಸಿದಿಲ್ಲ. ರೈತರು ಗ್ರಾಮೀಣ ಭಾಗದಲ್ಲಿ ಮಳೆಗಾಲದಲ್ಲಿ ನೀರು ಇಂಗಿಸಲು ಕ್ರಮ ಕೈಗೊಳ್ಳಬೇಕು. ಜಮೀನಿನ ಖಾಲಿ ಜಾಗದಲ್ಲಿ ಗುಂಡಿಗಳನ್ನು ನಿರ್ಮಿಸುವುದು ತೊಟ್ಟಿ ನಿರ್ಮಾಣ ಕೆರೆಗಳ ನಿರ್ಮಾಣದಂತಹ ಕೆಲಸಗಳನ್ನು ಕೈಗೊಂಡು ಮಳೆಗಾಲದಲ್ಲಿ ಅವುಗಳಲ್ಲಿ ನೀರು ಸಂಗ್ರಹವಾಗುವಂತೆ ಮಾಡಬೇಕು. ಇಂತಹ ಪ್ರಯತ್ನಗಳು ಭವಿಷ್ಯದಲ್ಲಿ ಬೇಸಿಗೆಯಲ್ಲಿ ನೀರಿನ ಕೊರತೆ ನೀಗಿಸಲಿವೆ’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT