ಸರ್ಕಾರ ಹಾಗೂ ಜಿಲ್ಲಾಡಳಿತದ ಆದೇಶದಂತೆ ಶುಕ್ರವಾರ ಸಂಜೆ (5 ಗಂಟೆ) ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಸೋಮವಾರ (ಜ.10) ಬೆಳಿಗ್ಗೆ7 ಗಂಟೆವರೆಗೆ ದೇವರ ದರ್ಶನ, ಬೆಟ್ಟದಲ್ಲಿ ತಂಗುವ ವ್ಯವಸ್ಥೆ ಸೇರಿದಂತೆ ಯಾವುದೇ ಸೇವೆಗಳು ಹಾಗೂ ಸೌಲಭ್ಯಗಳು ಇರುವುದಿಲ್ಲ. ದೇವಾಲಯದ ಒಳಾವರಣಕ್ಕೆ ಸೀಮಿತವಾಗಿ ಎಂದಿನಂತೆ ಪೂಜೆ ಪುನಸ್ಕಾರಗಳು ನಡೆಯಲಿವೆ‘ ಎಂದು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಜಯವಿಭವಸ್ವಾಮಿ ಅವರು ಹೇಳಿದ್ದಾರೆ.