‘ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗಿದ್ದು, ಶಾಲೆಗಳಲ್ಲಿ ಅಗತ್ಯವಿರುವ ಕಟ್ಟಡ, ಕೊಠಡಿ, ಗ್ರಂಥಾಲಯ ಸೇರಿದಂತೆ ಇನ್ನಿತರ ಹಲವು ಸೌಲಭ್ಯ ನೀಡಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಸಂಬಂಧಪಟ್ಟ ಸಚಿವರ ಜೊತೆ ಅನುದಾನಕ್ಕೆ ಮನವಿ ಮಾಡಲಾಗಿದೆ. ಗ್ರಾಮೀಣ ಪ್ರದೇಶದ ಜನರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಉನ್ನತ ಶಿಕ್ಷಣ ಕೊಡಿಸಿ ದೊಡ್ಡ ಹುದ್ದೆಗಳಿಗೆ ಏರುವಂತೆ ಮಾಡಬೇಕು. ಇದಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು’ ಎಂದು ತಿಳಿಸಿದರು.