<p><strong>ಚಾಮರಾಜನಗರ</strong>: ‘ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಕೇಂದ್ರದ ನಾಯಕರು ರಾಜ್ಯದ ಬಗ್ಗೆ ಯೋಚನೆ ಮಾಡಿ, ಪರಾಮರ್ಶೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪ ಅವರ ಪಾತ್ರ ಅಪಾರ. ಬಹಳ ವರ್ಷಗಳಿಂದ ಅವರನ್ನು ನೋಡಿದ್ದೇನೆ. ರೈತ ನಾಯಕರಾಗಿ ಹಲವು ಚಳವಳಿ, ಪಾದಯಾತ್ರೆಗಳನ್ನು ಮಾಡಿದ್ದಾರೆ. ಪಕ್ಷದಲ್ಲಿ ಅವರಿಗಿರುವ ಸ್ಥಾನ, ಅವರ ಮೇಲಿನ ಗೌರವವನ್ನು ಯಾವತ್ತಿಗೂ ಮರೆಯುವುದಕ್ಕಾಗುವುದಿಲ್ಲ. ಕೇಂದ್ರ ನಾಯಕರೊಂದಿಗೆ ಅವರು ಮಾತನಾಡಿದ್ದಾರೆ. ಅದರ ಫಲಶ್ರುತಿ ಗೊತ್ತಾಗಬೇಕಿದೆ’ ಎಂದರು.</p>.<p>ಮುಖ್ಯಮಂತ್ರಿ ಬದಲಾವಣೆ ಖಚಿತವೇ ಎಂಬ ಪ್ರಶ್ನೆಗೆ, ‘ಮುಂದೆ ಏನಾಗುತ್ತದೆ ಎಂಬುದನ್ನು ನೋಡೋಣ. ಸದ್ಯಕ್ಕೆ ಏನೂ ಗೊತ್ತಿಲ್ಲ.ಮುಂದಿನ ಬದಲಾವಣೆ ಆದಾಗ ಬೆಳವಣಿಗೆ ಆಧಾರದಲ್ಲಿ ನೋಡೋಣ’ ಎಂದರು.</p>.<p>‘ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ. ನಮ್ಮ ಗಮನ ಏನಿದ್ದರೂ ಕೋವಿಡ್ ನಿಯಂತ್ರಣ, ಪ್ರವಾಹ ಪರಿಸ್ಥಿತಿಯ ಬಗ್ಗೆ ಇತ್ತು. ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಅಭಿಪ್ರಾಯ ಸಂಗ್ರಹಿಸಿರಬಹುದು. ಆದರೆ ನನ್ನಲ್ಲಿ ಕೇಳಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಸುರೇಶ್ ಕುಮಾರ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ‘ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಕೇಂದ್ರದ ನಾಯಕರು ರಾಜ್ಯದ ಬಗ್ಗೆ ಯೋಚನೆ ಮಾಡಿ, ಪರಾಮರ್ಶೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಕ್ಷ ಕಟ್ಟುವುದರಲ್ಲಿ ಯಡಿಯೂರಪ್ಪ ಅವರ ಪಾತ್ರ ಅಪಾರ. ಬಹಳ ವರ್ಷಗಳಿಂದ ಅವರನ್ನು ನೋಡಿದ್ದೇನೆ. ರೈತ ನಾಯಕರಾಗಿ ಹಲವು ಚಳವಳಿ, ಪಾದಯಾತ್ರೆಗಳನ್ನು ಮಾಡಿದ್ದಾರೆ. ಪಕ್ಷದಲ್ಲಿ ಅವರಿಗಿರುವ ಸ್ಥಾನ, ಅವರ ಮೇಲಿನ ಗೌರವವನ್ನು ಯಾವತ್ತಿಗೂ ಮರೆಯುವುದಕ್ಕಾಗುವುದಿಲ್ಲ. ಕೇಂದ್ರ ನಾಯಕರೊಂದಿಗೆ ಅವರು ಮಾತನಾಡಿದ್ದಾರೆ. ಅದರ ಫಲಶ್ರುತಿ ಗೊತ್ತಾಗಬೇಕಿದೆ’ ಎಂದರು.</p>.<p>ಮುಖ್ಯಮಂತ್ರಿ ಬದಲಾವಣೆ ಖಚಿತವೇ ಎಂಬ ಪ್ರಶ್ನೆಗೆ, ‘ಮುಂದೆ ಏನಾಗುತ್ತದೆ ಎಂಬುದನ್ನು ನೋಡೋಣ. ಸದ್ಯಕ್ಕೆ ಏನೂ ಗೊತ್ತಿಲ್ಲ.ಮುಂದಿನ ಬದಲಾವಣೆ ಆದಾಗ ಬೆಳವಣಿಗೆ ಆಧಾರದಲ್ಲಿ ನೋಡೋಣ’ ಎಂದರು.</p>.<p>‘ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ. ನಮ್ಮ ಗಮನ ಏನಿದ್ದರೂ ಕೋವಿಡ್ ನಿಯಂತ್ರಣ, ಪ್ರವಾಹ ಪರಿಸ್ಥಿತಿಯ ಬಗ್ಗೆ ಇತ್ತು. ನಾಯಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಅಭಿಪ್ರಾಯ ಸಂಗ್ರಹಿಸಿರಬಹುದು. ಆದರೆ ನನ್ನಲ್ಲಿ ಕೇಳಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಸುರೇಶ್ ಕುಮಾರ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>