ಸಚಿವರೊಂದಿಗೆ ಮಾತನಾಡುತ್ತೇನೆ: ಟಿವಿ, ಫ್ರಿಡ್ಜ್ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ಆಧಾರದ ಮೇಲೆ ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕಿದೆ. ಖುದ್ದಾಗಿ ನಾನೇ ಉಮೇಶ್ ಕತ್ತಿಯವರ ಬಳಿ ಮಾತನಾಡುತ್ತೇನೆ. ಟಿವಿ ಎಲ್ಲರ ಮನೆಲ್ಲಿದೆ. ಸಮಾಜದ ಕಟ್ಟ ಕಡೆಯ ಮಗು ಕೂಡ ಚಂದನವಾಹಿನಿಯಲ್ಲಿ ಸಂವೇದ ಕಾರ್ಯಕ್ರಮ ವೀಕ್ಷಿಸಿದೆ’ ಎಂದರು.