<p><strong>ಚಾಮರಾಜನಗರ:</strong> ‘ಪಕ್ಷದಲ್ಲಿನ ಒಳ್ಳೆಯ ಸಂಗತಿಗಳನ್ನು ಹೊರಗಡೆ ಹೇಳಬೇಕು. ಒಳ್ಳೆಯ ಸಂಗತಿ ಅಲ್ಲದಿರುವುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದರು.</p>.<p>ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲ ಹಾಗೂ ಪಕ್ಷದ ವರಿಷ್ಠರಿಗೆ ಬರೆದಿರುವ ಪತ್ರದ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಸಚಿವ ಈಶ್ವರಪ್ಪ ಅವರು ಪತ್ರ ಬರೆದಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನ್ನ ಅಭಿಪ್ರಾಯವನ್ನು ಪಕ್ಷದ ವೇದಿಕೆಯಲ್ಲಿ ತಿಳಿಸುತ್ತೇನೆ’ ಎಂದು ಹೇಳಿದರು.</p>.<p class="Briefhead">ಬೆಂಗಳೂರಿನಲ್ಲಿ ಮಾತ್ರ 6ರಿಂದ 9ನೇ ತರಗತಿವರೆಗೆ 15 ದಿನ ರಜೆ</p>.<p>‘ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಲ್ಲಿ ಮಾತ್ರ 6ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ 15 ದಿನಗಳ ಕಾಲ ರಜೆ ನೀಡಲಾಗಿದೆ’ ಎಂದು ಸುರೇಶ್ ಕುಮಾರ್ ಅವರು ಹೇಳಿದರು.</p>.<p>‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಮುಂದಿನ 15 ದಿನಗಳು ನಿರ್ಣಾಯಕ ಆಗಿರುವುದರಿಂದ ಈ ಅವಧಿಯಲ್ಲಿ ರಜೆ ನೀಡಲು ತೀರ್ಮಾನಿಸಲಾಗಿದೆ. ಇದು ಬೆಂಗಳೂರಿಗೆ ಮಾತ್ರ ಅನ್ವಯವಾಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ರಾಜ್ಯದ ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧಾರಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಪಕ್ಷದಲ್ಲಿನ ಒಳ್ಳೆಯ ಸಂಗತಿಗಳನ್ನು ಹೊರಗಡೆ ಹೇಳಬೇಕು. ಒಳ್ಳೆಯ ಸಂಗತಿ ಅಲ್ಲದಿರುವುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದರು.</p>.<p>ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲ ಹಾಗೂ ಪಕ್ಷದ ವರಿಷ್ಠರಿಗೆ ಬರೆದಿರುವ ಪತ್ರದ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಸಚಿವ ಈಶ್ವರಪ್ಪ ಅವರು ಪತ್ರ ಬರೆದಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನ್ನ ಅಭಿಪ್ರಾಯವನ್ನು ಪಕ್ಷದ ವೇದಿಕೆಯಲ್ಲಿ ತಿಳಿಸುತ್ತೇನೆ’ ಎಂದು ಹೇಳಿದರು.</p>.<p class="Briefhead">ಬೆಂಗಳೂರಿನಲ್ಲಿ ಮಾತ್ರ 6ರಿಂದ 9ನೇ ತರಗತಿವರೆಗೆ 15 ದಿನ ರಜೆ</p>.<p>‘ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಲ್ಲಿ ಮಾತ್ರ 6ರಿಂದ 9ನೇ ತರಗತಿವರೆಗಿನ ಮಕ್ಕಳಿಗೆ 15 ದಿನಗಳ ಕಾಲ ರಜೆ ನೀಡಲಾಗಿದೆ’ ಎಂದು ಸುರೇಶ್ ಕುಮಾರ್ ಅವರು ಹೇಳಿದರು.</p>.<p>‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಮುಂದಿನ 15 ದಿನಗಳು ನಿರ್ಣಾಯಕ ಆಗಿರುವುದರಿಂದ ಈ ಅವಧಿಯಲ್ಲಿ ರಜೆ ನೀಡಲು ತೀರ್ಮಾನಿಸಲಾಗಿದೆ. ಇದು ಬೆಂಗಳೂರಿಗೆ ಮಾತ್ರ ಅನ್ವಯವಾಗಲಿದೆ’ ಎಂದು ಅವರು ಸ್ಪಷ್ಟಪಡಿಸಿದರು.</p>.<p>‘ರಾಜ್ಯದ ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧಾರಕೈಗೊಳ್ಳಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>