ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಕಾರಣದಿಂದ ಕೆಲವು ಪೋಷಕರು ಶಾಲಾ ಶುಲ್ಕ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಹಣ ಇದ್ದವರೂ ಕಟ್ಟುತ್ತಿಲ್ಲ. ಒಂದು ವೇಳೆ ಪೋಷಕರು ಶುಲ್ಕ ಪಾವತಿಸದಿದ್ದರೂ, ಮಕ್ಕಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕು ಎಂದು ಹೇಳಿದ್ದೆ. ಇದನ್ನು ಅವರು ಯಾವ ರೀತಿ ಅರ್ಥೈಸಿಕೊಂಡಿದ್ದಾರೋ ಗೊತ್ತಿಲ್ಲ. ಬೆಂಗಳೂರಿಗೆ ತೆರಳಿದ ನಂತರ ಪೋಷಕರಿಗೆ ಹಾಗೂ ಖಾಸಗಿ ಶಾಲೆಗಳಿಗೆ ತೊಂದರೆಯಾಗದಂತೆ ಹಿತಕರ ಕ್ರಮ ಕೈಗೊಳ್ಳುತ್ತೇನೆ’ ಎಂದು ಅವರು ಹೇಳಿದ್ದಾರೆ.