<p class="title"><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಶನಿವಾರ 18 ಕೋವಿಡ್ ಪ್ರಕರಣಗಳು ವರದಿಯಾಗಿವೆ. 29 ಮಂದಿ ಸೋಂಕುಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.</p>.<p class="bodytext">ಸಕ್ರಿಯ ಪ್ರಕರಣಗಳ ಸಂಖ್ಯೆ 238ಕ್ಕೆ ಇಳಿದಿದೆ. ಏಳು ಮಂದಿ ಐಸಿಯುನಲ್ಲಿದ್ದು, 23 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆ ಹಾಗೂ ಕೇರ್ ಕೇಂದ್ರಗಳಲ್ಲಿದ್ದಾರೆ.</p>.<p class="bodytext">ಜಿಲ್ಲೆಯಲ್ಲಿ ಈವರೆಗೆ 32,053 ಪ್ರಕರಣಗಳು ವರದಿಯಾಗಿವೆ. 31,285 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p class="bodytext">ಶನಿವಾರ 1,339 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,321 ವರದಿಗಳು ನೆಗೆಟಿವ್ ಬಂದಿವೆ. 18 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.</p>.<p class="bodytext">18 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ ಏಳು, ಹನೂರಿನ ಒಂಬತ್ತು ಮಂದಿ, ಗುಂಡ್ಲುಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.</p>.<p class="bodytext">ಗುಣಮುಖರಾದ 29 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ ಎಂಟು, ಗುಂಡ್ಲುಪೇಟೆಯ ಮೂವರು, ಹನೂರಿನ 18 ಮಂದಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚಾಮರಾಜನಗರ:</strong> ಜಿಲ್ಲೆಯಲ್ಲಿ ಶನಿವಾರ 18 ಕೋವಿಡ್ ಪ್ರಕರಣಗಳು ವರದಿಯಾಗಿವೆ. 29 ಮಂದಿ ಸೋಂಕುಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.</p>.<p class="bodytext">ಸಕ್ರಿಯ ಪ್ರಕರಣಗಳ ಸಂಖ್ಯೆ 238ಕ್ಕೆ ಇಳಿದಿದೆ. ಏಳು ಮಂದಿ ಐಸಿಯುನಲ್ಲಿದ್ದು, 23 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆ ಹಾಗೂ ಕೇರ್ ಕೇಂದ್ರಗಳಲ್ಲಿದ್ದಾರೆ.</p>.<p class="bodytext">ಜಿಲ್ಲೆಯಲ್ಲಿ ಈವರೆಗೆ 32,053 ಪ್ರಕರಣಗಳು ವರದಿಯಾಗಿವೆ. 31,285 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p class="bodytext">ಶನಿವಾರ 1,339 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,321 ವರದಿಗಳು ನೆಗೆಟಿವ್ ಬಂದಿವೆ. 18 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ.</p>.<p class="bodytext">18 ಮಂದಿ ಸೋಂಕಿತರಲ್ಲಿ ಚಾಮರಾಜನಗರ ತಾಲ್ಲೂಕಿನ ಏಳು, ಹನೂರಿನ ಒಂಬತ್ತು ಮಂದಿ, ಗುಂಡ್ಲುಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು ಇದ್ದಾರೆ.</p>.<p class="bodytext">ಗುಣಮುಖರಾದ 29 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ ಎಂಟು, ಗುಂಡ್ಲುಪೇಟೆಯ ಮೂವರು, ಹನೂರಿನ 18 ಮಂದಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>