ಕಾಡಾನೆ ಹಾವಳಿ ತಪ್ಪಿಸಿ: ನಾಲ್ಕು ತಿಂಗಳ ಹಿಂದೆ ಇದೇ ರೀತಿ ಕಾವಲು ಕಾಯುವ ಸಂದರ್ಭದಲ್ಲಿ ಕಾಡಾನೆ ದಾಳಿ ಮಾಡಿತ್ತು. ಆಗ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ದಾಳಿಗೆ ತುತ್ತಾಗಿದ್ದಾರೆ. ಈ ಭಾಗದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕಾಡಂಚಿನ ಜಮೀನಿನ ರೈತರು ಸದಾ ಆತಂಕದಲ್ಲೆ ಇರಬೇಕಾದ ಪರಿಸ್ಥಿತಿ ಎದುರಾಗಿದೆ. ಕೂಡಲೇ ಅರಣ್ಯ ಇಲಾಖೆ ಕಾಡಾನೆ ಹಾವಳಿ ತಪ್ಪಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.