<p><strong>ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ):</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭಾನುವಾತ ಕಾಡಾನೆಯ ಫೋಟೊ ತೆಗೆಯಲು ಹೋದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆದಿದೆ.</p>. <p>ಮಧುಮಲೈ ಅರಣ್ಯದ ಕಡೆಯಿಂದ ಬಂಡೀಪುರದ ಕಡೆಗೆ ಬರುವ ಸಂದರ್ಭದಲ್ಲಿ ಕೆಕ್ಕನಹಳ್ಳ ಅರಣ್ಯ ಪ್ರದೇಶದ ಬಳಿ ಮರಿಯೊಂದಿಗೆ ಇದ್ದ ಆನೆಯ ಪೋಟೋ ತೆಗೆಯಲು ಹೋದಾಗ ದಾಳಿ ನಡೆದಿದೆ.</p>. <p>ದಾಳಿಯಿಂದ ಪ್ರಜ್ಞೆತಪ್ಪಿ ರಸ್ತೆಯಲ್ಲಿಯೇ ಬಿದ್ದಿದ್ದ ವ್ಯಕ್ತಿಯನ್ನು ಸಂಬಂಧಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅನೆಯ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.</p>. <p>ದಾಳಿಗೊಳಗಾದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದರು.</p>. <p>ಆನೆಗಳು ಮರಿಗಳೊಂದಿಗೆ ಇರುವಾಗ ಮನುಷ್ಯರನ್ನು ಕಂಡರೆ ದಾಳಿ ಮಾಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಮರಿಯ ರಕ್ಷಣೆ ಮಾಡಲು ಸಿಟ್ಟಿಗೇಳುವುದು ಸಹಜ, ಇಂತಹ ಸಂದರ್ಭದಲ್ಲಿ ಪ್ರವಾಸಿಗರು ಪೋಟೋ ತೆಗೆಯಲು ಮುಂದಾದಾಗಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ (ಚಾಮರಾಜನಗರ ಜಿಲ್ಲೆ):</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭಾನುವಾತ ಕಾಡಾನೆಯ ಫೋಟೊ ತೆಗೆಯಲು ಹೋದ ವ್ಯಕ್ತಿಯೊಬ್ಬರ ಮೇಲೆ ಆನೆ ದಾಳಿ ನಡೆದಿದೆ.</p>. <p>ಮಧುಮಲೈ ಅರಣ್ಯದ ಕಡೆಯಿಂದ ಬಂಡೀಪುರದ ಕಡೆಗೆ ಬರುವ ಸಂದರ್ಭದಲ್ಲಿ ಕೆಕ್ಕನಹಳ್ಳ ಅರಣ್ಯ ಪ್ರದೇಶದ ಬಳಿ ಮರಿಯೊಂದಿಗೆ ಇದ್ದ ಆನೆಯ ಪೋಟೋ ತೆಗೆಯಲು ಹೋದಾಗ ದಾಳಿ ನಡೆದಿದೆ.</p>. <p>ದಾಳಿಯಿಂದ ಪ್ರಜ್ಞೆತಪ್ಪಿ ರಸ್ತೆಯಲ್ಲಿಯೇ ಬಿದ್ದಿದ್ದ ವ್ಯಕ್ತಿಯನ್ನು ಸಂಬಂಧಿಗಳು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅನೆಯ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.</p>. <p>ದಾಳಿಗೊಳಗಾದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದರು.</p>. <p>ಆನೆಗಳು ಮರಿಗಳೊಂದಿಗೆ ಇರುವಾಗ ಮನುಷ್ಯರನ್ನು ಕಂಡರೆ ದಾಳಿ ಮಾಡುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಮರಿಯ ರಕ್ಷಣೆ ಮಾಡಲು ಸಿಟ್ಟಿಗೇಳುವುದು ಸಹಜ, ಇಂತಹ ಸಂದರ್ಭದಲ್ಲಿ ಪ್ರವಾಸಿಗರು ಪೋಟೋ ತೆಗೆಯಲು ಮುಂದಾದಾಗಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>