<p><strong>ಹನೂರು</strong>: ಜಮೀನಿನಲ್ಲಿನ ಅರಿಸಿನ ಬೆಳೆಯನ್ನು ರಾತ್ರಿ ವೇಳೆ ಕಾವಲು ಕಾಯುತ್ತಿದ್ದ ರೈತನನ್ನು ಕಾಡಾನೆಯು ದಾಳಿ ಮಾಡಿ ಕೊಂದು ಹಾಕಿದೆ.</p>.<p>ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದ ನಂಜಪ್ಪ(75) ಮೃತ ರೈತ. ಮಂಗಳವಾರ ರಾತ್ರಿ 2 ಗಂಟೆಯಲ್ಲಿ ಆನೆ ದಾಳಿ ಮಾಡಿದ್ದು, ನಂಜಪ್ಪ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.</p>.<p>ಘಟನೆ ತಿಳಿಯುತ್ತಿದ್ದಂತೆ ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗದ ಡಿಎಫ್ಒ ಚಕ್ರಪಾಣಿ ಮತ್ತು ಆರ್ಎಫ್ಒ ಪುಟ್ಟರಾಜು ಹಾಗು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.</p>.<p>‘ಅರಣ್ಯ ಇಲಾಖೆಯ ನಿರ್ಲಕ್ಷವೇ ಇಂತಹ ಘಟನೆಗಳಿಗೆ ಕಾರಣ. ಅರಣ್ಯದಂಚಿನಲ್ಲಿ ಸಮರ್ಪಕವಾಗಿ ರೈಲ್ವೆ ಬ್ಯಾರಿಕೇಡ್ಗಳನ್ನು ಅಳವಡಿಸಿದರೆ ಇಂತಹ ಘಟನೆ ಜರುಗುವುದಿಲ್ಲ. ಹಾಗಾಗಿ ಸೂಕ್ತ ಕ್ರಮ ತೆಗೆದುಕೊಳ್ಳಿ’ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.</p>.<p>ಡಿಎಫ್ಓ ಚಕ್ರಪಾಣಿ ಮಾತನಾಡಿ, ‘ಮರಣೋತ್ತರ ಪರೀಕ್ಷೆ ನಡೆದ ನಂತರ ಮೃತರ ಸಂಬಂಧಿಕರಿಗೆ ₹5 ಲಕ್ಷ ನೀಡಲಾಗುವುದು. ವರದಿ ಬಂದ ನಂತರ ಇನ್ನೂ $10 ಲಕ್ಷ ರೂ ಪರಿಹಾರ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರೂ ಪುತ್ರಿಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು</strong>: ಜಮೀನಿನಲ್ಲಿನ ಅರಿಸಿನ ಬೆಳೆಯನ್ನು ರಾತ್ರಿ ವೇಳೆ ಕಾವಲು ಕಾಯುತ್ತಿದ್ದ ರೈತನನ್ನು ಕಾಡಾನೆಯು ದಾಳಿ ಮಾಡಿ ಕೊಂದು ಹಾಕಿದೆ.</p>.<p>ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಮನ ಕತ್ತರಿ ಗ್ರಾಮದ ನಂಜಪ್ಪ(75) ಮೃತ ರೈತ. ಮಂಗಳವಾರ ರಾತ್ರಿ 2 ಗಂಟೆಯಲ್ಲಿ ಆನೆ ದಾಳಿ ಮಾಡಿದ್ದು, ನಂಜಪ್ಪ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.</p>.<p>ಘಟನೆ ತಿಳಿಯುತ್ತಿದ್ದಂತೆ ಮಲೈ ಮಹದೇಶ್ವರ ವನ್ಯ ಜೀವಿ ವಿಭಾಗದ ಡಿಎಫ್ಒ ಚಕ್ರಪಾಣಿ ಮತ್ತು ಆರ್ಎಫ್ಒ ಪುಟ್ಟರಾಜು ಹಾಗು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.</p>.<p>‘ಅರಣ್ಯ ಇಲಾಖೆಯ ನಿರ್ಲಕ್ಷವೇ ಇಂತಹ ಘಟನೆಗಳಿಗೆ ಕಾರಣ. ಅರಣ್ಯದಂಚಿನಲ್ಲಿ ಸಮರ್ಪಕವಾಗಿ ರೈಲ್ವೆ ಬ್ಯಾರಿಕೇಡ್ಗಳನ್ನು ಅಳವಡಿಸಿದರೆ ಇಂತಹ ಘಟನೆ ಜರುಗುವುದಿಲ್ಲ. ಹಾಗಾಗಿ ಸೂಕ್ತ ಕ್ರಮ ತೆಗೆದುಕೊಳ್ಳಿ’ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.</p>.<p>ಡಿಎಫ್ಓ ಚಕ್ರಪಾಣಿ ಮಾತನಾಡಿ, ‘ಮರಣೋತ್ತರ ಪರೀಕ್ಷೆ ನಡೆದ ನಂತರ ಮೃತರ ಸಂಬಂಧಿಕರಿಗೆ ₹5 ಲಕ್ಷ ನೀಡಲಾಗುವುದು. ವರದಿ ಬಂದ ನಂತರ ಇನ್ನೂ $10 ಲಕ್ಷ ರೂ ಪರಿಹಾರ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಮೃತರಿಗೆ ಪತ್ನಿ, ಪುತ್ರ ಹಾಗೂ ಇಬ್ಬರೂ ಪುತ್ರಿಯರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>